Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ : ದೆಹಲಿಯಲ್ಲಿ ರೇಣುಕಾಚಾರ್ಯ ಹೇಳಿದ್ದೇನು..?

---Advertisement---

ದೆಹಲಿ: ರಾಜ್ಯಾಧ್ಯಕ್ಷರ ಬದಲಾವಣೆ ಜನವರಿ ಸಮಯಕ್ಕೆ ಆಗುತ್ತದೆ ಎಂದು ಈಗಾಗಲೇ ಬಿಜೆಪಿಯಲ್ಲಿ ಇರುವವರೇ ಹೇಳುತ್ತಿದ್ದಾರೆ. ಕುಮಾರ ಬಂಗಾರಪ್ಪ ಅವರು ಈ ಬಗ್ಗೆ ಮಾತಾಡಿದ್ದಾರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ ಅವರು, ಹೈಕಮಾಂಡ್ ಹೇಳಿರುವಾಗ ನಿಂದೇನಪ್ಪ ಎಂದು ಗರಂ ಆಗಿದ್ದಾರೆ.

 

ಭಾರತೀಯ ಜನತಾ ಪಾರ್ಟಿಗೆ ಬಂದು ಎಷ್ಟು ವರ್ಷ ಆಯ್ತು. ರಾಜ್ಯಾಧ್ಯಕ್ಷರನ್ನ ನೇಮಕ ಮಾಡಿದ್ದು ನಾವ್ಯಾರು ಅಲ್ಲ, ಯಡಿಯೂರಪ್ಪ ಅವರು ಅಲ್ಲ. ನರೇಂದ್ರ ಮೋದಿಯವರು, ಅಮಿತಾ ಶಾಜಿ ಅವರು, ಜೆಪಿ ನಡ್ಡಾ ಅವರು, ಸಂತೋಷ್ ಜೀ ಅವರು. ಮೊನ್ನೆ ತಾನೇ ಕರ್ನಾಟಕಕ್ಕೆ ಬಂದಂತ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಲ್ಲಿ ಒಬ್ಬರಾದ ಅಗರ್ ವಾಲ್ ಅವರು ಏನು ಹೇಳಿದ್ದಾರೆ. ವಿಜಯೇಂದ್ರ ಅವರು ಮಜಭೂತವಾಗಿ ಸಂಘಟನೆ ಮಾಡಿದ್ದಾರೆ. ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೇ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದಿದ್ದಾರೆ. ಅವರೇ ಹೇಳಿದ ಮೇಲೆ ನಿಂದೇನಪ್ಪ ಕೆಲಸ.

ಒಂದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು ಯಡಿಯೂರಪ್ಪ ಹಾಗೂ ಬಿಜೆಪಿಯ ಆಶೀರ್ವಾದ. ಸೊರಬದಲ್ಲಿ ಸ್ಥಳೀಯ ಮುಖಂಡರನ್ನ, ಕಾರ್ಯಕರ್ತರನ್ನ ಪಕ್ಷದ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಬಿಜೆಪಿ ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರನ್ನ ನೇಮಕ ಮಾಡಿದ್ದಕ್ಕೆ ನೀನು ಪರ್ಯಾಯವಾಗಿ ಒಬ್ಬ ಅಧ್ಯಕ್ಷರನ್ನ ನೇಮ ಮಾಡಿಕೊಂಡೆ. ಸೊರಬದಲ್ಲಿಯೇ ನೀನೇ ಅಧ್ಯಕ್ಷರನ್ನಾಗಿ ಮಾಡಿಕೊಂಡು ಸ್ವಯಂಕೃತ ಅಪರಾಧದಿಂದ ಸೋತೆ. ಆದರೆ ಕೆಲವೊಂದಿಷ್ಟು‌ ಮಂದಿ ಜೊತೆ ಸೇರಿಕೊಂಡು ಏನೇನು ಮಾತಾಡ್ತೀಯ ಎಂಬುದು ಎಲ್ಲರಿಗೂ ಗೊತ್ತಿದೆ. ರಾಜ್ಯದ ಅಧ್ಯಕ್ಷರು ಒಳ್ಳೆ ಕೆಲಸ‌ ಮಾಡಿದ್ದಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ. ನೇಮಕವಾಗಿ ಇನ್ನು ಒಂದು ವರ್ಷವಾಗಿಲ್ಲ. ಭ್ರಷ್ಟಾಚಾರದ ವಿರುದ್ಧ ಯಶಸ್ವುಯಾಗಿ ಹೋರಾಟ ಮಾಡಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರ ಪಾದಯಾತ್ರೆಯ ಫಲ. ವಿಜಯೇಂದ್ರ ಬದಲಾವಣೆಯಾಗುತ್ತದೆ ಎಂಬುದು ತಿರುಕನ ಕನಸು ಎಂದು ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment