Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮತ್ತೆ ಶುರುವಾಯ್ತು ರೋಹಿಣಿ-ರೂಪ ಪ್ರಕರಣ ಸದ್ದು : ಅಂದು ರೋಹಿಣಿ.. ಇಂದು ರೂಪ ಮಾನನಷ್ಟ ಮೊಕದ್ದಮೆ‌ ದಾಖಲು..!

---Advertisement---

ಕಳೆದ ವರ್ಷವಷ್ಟೇ ಐಎಎಸ್‌ ಅಧಿಕಾರಿ ರೋಹಿಣಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಮಾತಿನ ವಾಕ್ಸಮರ ನಡೆದಿತ್ತು. ದೂರುಗಳು ದಾಖಲಾಗಿತ್ತು. ಆದರೆ ಇದೀಗ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಲಾಗಿದೆ. 2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ಆ ಹೇಳಿಕೆಯ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಕೂಡ ಹಾಕಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ ಎಂದು ಡಿ.ರೂಪಾ ಆರೋಪ ಮಾಡಿದ್ದಾರೆ.

ಆದರೆ ಈ ಹೇಳಿಕೆ ಒಂದು ವರ್ಷದ ಹಿಂದೆ ಆಗಿರೋದು. ಆದರೆ ಒಂದು ವರ್ಷಗಳ ಬಳಿಕ ಡಿ.ರೂಪಾ ದೂರು ದಾಖಲಿಸಲಿಸಿರುವುದು ಯಾಕೆ ಎಂಬ ಚರ್ಚೆಗಳು ಶುರುವಾಗಿವೆ‌. ವರ್ಷದ ಹಿಂದೆ ಕೊಟ್ಟಂತ ಹೇಳಿಕೆ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ಕಾರಣವೇನು ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ. ಒಂದು ವರ್ಷದ ಹಿಂದೆಯೇ ರೋಹಿಣಿ ಸಿಂಧೂರಿ ಅವರು ಡಿ.ರೂಪಾ ಹೇಳಿಕೆಯಿಂದ ಮಾನನಷ್ಟ ಆಗಿದೆ ಎಂದು ಕೇಸ್ ದಾಖಲಿಸಿದ್ದರು‌. ಈ ಕೇಸ್ ರದ್ದು‌ಪಡಿಸಲು ಕೋರಿ ಡಿ.ರೂಪಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಕೂಡ ಈ ಕೇಸದ ರದ್ದು ಪಡಿಸಲು ನಿರಾಕರಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಹೋಗಿದ್ದಾರೆ. ಈ ಬೆನ್ನಲ್ಲೇ ಡಿ.ರೂಪಾ ಈಗ ಉಲ್ಟಾ ಮಾನನಷ್ಟ ಕೇಸು ದಾಖಲಿಸಿದ್ದಾರೆ. ರೋಹಿಣಿ ಸಿಂಧೂರಿ ಅವರ ಮೇಲೆಯೇ ದಾಖಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...