Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆಡುಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಪ್ರಾಣಿ ಪಕ್ಷಿಗಳ ದತ್ತು ಸ್ವೀಕಾರಕ್ಕೆ ಅವಕಾಶ

---Advertisement---

ಚಿತ್ರದುರ್ಗ. ಡಿ.18: ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯದ ಅಭಿವೃದ್ಧಿಗಾಗಿ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಆಡು ಮಲ್ಲೇಶ್ವರ ಕಿರು ಮೃಗಾಲಯದಲ್ಲಿ 315 ವಿವಿಧ ರೀತಿಯ ಪ್ರಾಣಿ ಪಕ್ಷಿಗಳನ್ನು ಪ್ರದರ್ಶಿಸಲಾಗುತ್ತಿದೆ. ಸ್ವ-ಇಚ್ಛೆದಾರರು, ಪ್ರಾಣಿ ಪ್ರಿಯರು ಮೃಗಾಲಯದಲ್ಲಿನ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಲ್ಲಿ ಮೃಗಾಲಯದ ಪ್ರಾಣಿ, ಪಕ್ಷಿಗಳ ಆಹಾರ, ವೈದ್ಯಕೀಯ ವೆಚ್ಚ, ಅಭಿವೃದ್ಧಿ ಕಾಮಗಾರಿ ಹಾಗೂ ಇತ್ಯಾದಿ ವೆಚ್ಚಗಳಿಗೆ ಮತ್ತು ಮೃಗಾಲಯದ ಅಭಿವೃದ್ಧಿಗೆ ಮತ್ತಷ್ಟು ಸಹಾಯಕವಾಗುತ್ತದೆ. ಅಲ್ಲದೇ ಪ್ರಾಣಿ ದತ್ತು ಪಡೆಯಲು ನೀಡಿದ ಮೊತ್ತಕ್ಕೆ ಆದಾಯ ತೆರಿಗೆ ಕಾಯ್ದೆ 1961ರ ಕಲಂ 80ಜಿ(5)(6)ರನ್ವಯ ಶೇ.50ರಷ್ಟು ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ.

ದತ್ತು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಆಡುಮಲ್ಲೇಶ್ವರ ಕಿರು ಮೃಗಾಲಯದ ವಲಯ ಅರಣ್ಯಾಧಿಕಾರಿ ದೂರವಾಣಿ ಸಂಖ್ಯೆ 7795709638 ಹಾಗೂ ಗಸ್ತು ಅರಣ್ಯ ಪಾಲಕ 8722618795 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment