Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶ‌ನ್ ನೀಡಿದ್ದ ಭಗವದ್ಗೀತೆ ಹಿಡಿದು ಜೈಲಿನಿಂದ ಹೊರ ಬಂದ ಅನುಕುಮಾರ್..!

Facebook
Twitter
Telegram
WhatsApp

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಇಂದು ಏಳನೇ ಆರೋಪಿಯಾಗಿದ್ದ ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ‌ ಜೈಲಿನಿಂದ ಹೊರಗೆ ಬರುವಾಗ ಆತ ತನ್ನ ಕೈನಲ್ಲಿ ಹಿಡಿದಿದ್ದ ಭಗವದ್ಗೀತೆ ಪುಸ್ತಕ ಎಲ್ಲರ ಗಮನ ಸೆಳೆದಿದೆ. ಈ ಭಗವದ್ಗೀತೆ ಪುಸ್ತಕವನ್ನು ನಟ ದರ್ಶನ್ ನೀಡಿದ್ದರಂತೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವಾಗ ದರ್ಶನ್ ಆ ಪುಸ್ತಕವನ್ನು ಅನುಕುಮಾರ್ ಅವರಿಗೆ ನೀಡಿದ್ದರಂತೆ. ಇಲ್ಲಿಯವರೆಗೂ ಆ ಪುಸ್ತಕವನ್ನು ಅನುಕುಮಾರ್ ಜೋಪಾನವಾಗಿಟ್ಟುಕೊಂಡಿದ್ದರಂತೆ.

ಅನುಕುಮಾರ್ ಅವರಿವೆ ಕಳೆದ ಶುಕ್ತವಾರವೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿರಲಿಲ್ಲ. ಹೀಗಾಗಿ ಇಂದು ರಿಲೀಸ್ ಆಗಿದ್ದಾರೆ. ಷರತ್ತು ಬದ್ಧ ಜಾಮೀನಿಗೆ ಶ್ಯೂರಿಟಿ ಕೂಡ ಹಾಕಬೇಕಿದ್ದದ್ದರಿಂದ ಇಂದು ಬಿಡುಗಡೆಯಾಗಿದ್ದಾರೆ. ಭಗವದ್ಗೀತೆ ಪುಸ್ತಕದೊಂದಿಗೆ ಜೈಲಿನಲ್ಲಿ ಕಾಲ ಕಳೆದಿದ್ದ ಅನುಕುಮಾರ್, ತನ್ನ ಸಹೋದರ ಜೊತೆಗೆ ಜೈಲಿನಿಂದ ತೆರಳಿದ್ದಾರೆ.

ಅತ್ತ ಶಿವಮೊಗ್ಗ ಜೈಲಿನಲ್ಲಿದ್ದ ಆರನೇ ಆರೋಪಿ ಜಗದೀಶ್ ಕೂಡ ಬಿಡುಗಡೆಯಾಗಿದ್ದಾನೆ. ಶಿವಮೊಗ್ಗ ಕಾರಾಗೃಹದಿಂದ ಬುಧವಾರ ಸಂಜೆ ವೇಳೆಗೆ ರಿಲೀಸ್ ಆಗಿದ್ದಾರೆ. ಬುಧವಾರ ಬೆಳಗ್ಗೆ ಬೆಂಗಳೂರಿನ ಕೋರ್ಟ್ ನಲ್ಲಿ ಜಾಮೀನು ಪ್ರಕ್ರಿಯೆ ಮುಗಿದಿದ್ದರಿಂದ ಸಂಜೆ ವೇಳೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಜಗದೀಶ್ ರನ್ನು ಕರೆದುಕೊಂಡು ಹೋಗಲು ಅವರ ತಮ್ಮ ಜೈಲಿನ ಬಳಿ ಬಂದಿದ್ದರು. ಮಾಧ್ಯಮದವರ ಕಣ್ಣಿಂದ ತಪ್ಪಿಸಿಕೊಂಡು ಚಿತ್ರದುರ್ಗಕ್ಕೆ ಹೋಗಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಈಗಾಗಲೇ ಏಳು ಜನರಿಗೆ ಜಾಮೀನು ನೀಡಿದೆ. ಆದರೆ ಕಾನೂನು ಪ್ರಕ್ರಿಯೆ ಮುಗಿಸಿ ಒಬ್ಬೊಬ್ಬರೇ ಹಿರಗೆ ಬರುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನನ್ನ ಗಟ್ಟಿಗಿತ್ತಿ ಅಂತಿದ್ರು.. ಬಹಳ ನೋವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಫಸ್ಟ್ ರಿಯಾಕ್ಷನ್..!

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಗಳನ್ನ ಬಳಸಿದ್ದಾರೆ ಎಂಬ ಆರೋಪದ ಮೇಲೆ ಸದ್ಯಕ್ಕೆ ಬೆಳಗಾವಿ ಪೊಲೀಸರು ಸಿಟಿ ರವಿ ಅವರನ್ನ ಬಂಧಿಸಿದ್ದಾರೆ. ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು,

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡಿ : ಕರವೇ ಕಾರ್ಯಕರ್ತರ ಒತ್ತಾಯ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡದಿರುವ ಲೋಕೋಪಯೋಗಿ ಇಲಾಖೆ ನಿರ್ಲಕ್ಷೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ

ಉದ್ಯೋಗ ವಾರ್ತೆ | ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

  ಚಿತ್ರದುರ್ಗ. ಡಿ.19: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಭಾಗಗಳಲ್ಲಿ ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರ/ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು 2025ರ ಜನವರಿ 01ರ ಸಂಜೆ 5

error: Content is protected !!