Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋಲ್ಡ್ ಸುರೇಶ್ ಮನೆಯಿಂದ ಹೊರಗೆ ಬರಲು ಅವರ ಬಿಸಿನೆಸ್ ಕಾರಣವಾ..?

---Advertisement---

ಬೆಂಗಳೂರು: ಬುಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಕಳೆದ ವಾರ ಅನಿರೀಕ್ಷಿತ ತಿರುವೊಂದು ಎದುರಾಗಿತ್ತು. ಶಿಶಿರ್‌ ಮನೆಯಿಂದ ಔಟ್ ಆಗಿದ್ದರು. ಆದರೆ ಗೋಲ್ಡ್ ಸುರೇಶ್ ಸೇಫ್ ಆಗಿದ್ರು ಮನೆಯಿಂದ ಬರಬೇಕಾಗಿ ಬಂತು. ‘ನಿಮ್ಮ ಅಗತ್ಯ ಬಿಗ್ ಬಾಸ್ ಮನೆಗಿಂತ ಕುಟುಂಬಕ್ಕೆ ಹೆಚ್ಚಾಗಿದೆ’ ಎಂದು ಬಿಗ್ ಬಾಸ್ ಹೇಳಿದಾಗ ಎಲ್ಲರೂ ಅವರ ಕುಟುಂಬಕ್ಕೆ ಏನಾದರೂ ಆಯ್ತಾ ಎಂದೇ ಆತಂಕಗೊಂಡಿದ್ದರು. ಅವರ ತಂದೆ ಹಾಗೂ ಸಹೋದರ ವಿಡಿಯೋ ಮೂಲಕ ನಮಗೆ ಏನು ಆಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು. ಏನು ಆಗಿಲ್ಲ ಅಂದ್ರೆ ಬಿಗ್ ಬಾಸ್ ಮನೆಯಿಂದ ಹೊರಗ್ಯಾಕೆ ಬಂದ್ರು ಎಂಬ ಪ್ರಶ್ನೆ ವೀಕ್ಷಕರದ್ದು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ.

ಖಾಸಗಿ ಚಾನೆಲ್ ಒಂದಕ್ಕೆ ಮಾತನಾಡಿರುವ ಗೋಲ್ಡ್ ಸುರೇಶ್, ನಾನೊಬ್ಬ ಬಿಸಿನೆಸ್ ಮ್ಯಾನ್. ನನ್ನದೇ ಆದ ಅನೇಕ ಬಿಸಿನೆಸ್ ಗಳಿವೆ. ನನ್ನನ್ನು ನಂಬಿ ಹಲವು ಕುಟುಂಬಗಳಿವೆ. ಬಿಗ್ ಬಾಸ್ ಗೆ ಬರುವುದಕ್ಕೂ ಮುನ್ನ ನಾನು ಬಿಸಿನೆಸ್ ನೋಡಿಕೊಳ್ಳುತ್ತಿದ್ದೆ. ಬಿಗ್ ಬಾಸ್ ಮನೆಗೆ ಹೋದರೆ ನನ್ನ ಎಲ್ಲಾ ಬಿಸಿನೆಸ್ ನೋಡಿಕೊಳ್ಳಯವವರು ಯಾರು ಎಂಬ ಯೋಚನೆ ಇತ್ತು. ತುಂಬಾ ಯೋಚಿಸಿದ ಬಳಿಕ ಎಲ್ಲಾ ಜವಬ್ದಾರಿಯನ್ನು ನನ್ನ ಧರ್ಮಪತ್ನಿಗೆ ವಹಿಸಿದೆ.

ಆದರೆ ಆಕೆಗೆ ಬಿಸಿನೆಸ್ ನಲ್ಲಿ ಯಾವುದೇ ಅನುಭವ ಇರಲಿಲ್ಲ. ಎಲ್ಲವನ್ನು ಒಟ್ಟಿಗೆ ಬಿಟ್ಟು ಹೋಗಿದ್ದ ಕಾತಣ ನಿಭಾಯಿಸುವುದು ಆಕೆಗೆ ಕಷ್ಟವಾಗಿತ್ತು. ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಆಕೆ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಇದರಿಂದ ಬಿಗ್ ಬಾಸ್ ಮನೆಯಿಂದ ಹೊರಗೆ ಬರಬೇಕಾಯ್ತು’ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment