ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ : ಕಣ್ಣೀರು ಹಾಕುತ್ತಾ ಹೇಳಿದ್ದೇನು..?

suddionenews
1 Min Read

 

ಬೆಳಗಾವಿ: ಅಧಿವೇಶನದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಜಾಗೂ ಸಿಟಿ ರವಿ ವಿಚಾರ ರಾಜ್ಯದಲ್ಲೆಡೆ ಸಂಚಲನ ಸೃಷ್ಟಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಹಿನ್ನೆಲೆಯಲ್ಲಿ ಸಿಟಿ ರವಿ ಬಂಧನ ಕೂಡ ಆಗಿದೆ‌. ಈ ಸಂಬಂಧ ಇಂದು ಬೆಳಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಣ್ಣೀರು ಹಾಕುತ್ತಲೇ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

‘ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ನಾವೂ ಧರಣಿ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಡ್ರಗ್ ಅಡಿಕ್ಟ್ ಡ್ರಗ್ ಅಡಿಕ್ಟ್ ಎಂದು ಸಿಟಿ ರವಿ ಹೇಳುತ್ತಿದ್ದರು. ಡ್ರಗ್ ಅಡಿಕ್ಟ್ ಅಂತ ಯಾಕೆ ಹೇಳ್ತೀರಾ..? ನೀವೂ ಕೂಡ ಆಕ್ಸಿಡೆಂಟ್ ಮಾಡಿದ್ದೀರಲ್ಲ. ತಾವೂ ಕೂಡ ಒಂದು ಜೀವ ತೆಗೆದವರು ಆಗುತ್ತೀರಾ ಅಲ್ವಾ ಎಂದೇ ಆಗ ತಿರುಗಿ ಅಸಹ್ಯ ಪದ ಬಳಕೆ ಮಾಡಿದರು. ಅದನ್ನ ಬಳಸಲಿಕ್ಕೆ ನನಗೆ ಅಸಹ್ಯವಾಗುತ್ತದೆ. ನಾಗರಿಕ ಸಮಾಜದಲ್ಲಿ, ರಾಜಕೀಯದಲ್ಲಿ ಬಹಳಷ್ಟು ಧೈರ್ಯ ಮಾಡಿ ಇಲ್ಲಿಯವರೆಗೂ ಬಂದಿದ್ದೇನೆ. ಎಲ್ಲಾ ಮಹಿಳೆಯರನ್ನು ಪ್ರತಿನಿಧಿಸುತ್ತಿದ್ದೇನೆ. ಆದರೆ ಸಿಟಿ ರವಿ ಆ‌ ಮಾತನ್ನು ಹತ್ತು ಬಾರಿ ಹೇಳಿ ತೇಜೋವಧೆ ಮಾಡಿದರು.

ಇದಕ್ಕೆಲ್ಲ ಹೆದರುವುದಿಲ್ಲ. ಒಬ್ಬ ತಾಯಿ, ಅಕ್ಕ, ಅತ್ತೆಯಾಗಿದ್ದೇನೆ. ಇವತ್ತು ನನ್ನನ್ನು ನೋಡಿ ಸಾವಿರಾರು ಮಹಿಳೆಯರು ರಾಜಕೀಯಕ್ಕೆ ಬರಬೇಕು ಎಂದುಕೊಳ್ಳುತ್ತಿದ್ದಾರೆ. ಸದನದಲ್ಲಿ ಈ ರೀತಿ ಮಾತಾಡಿದರೆ ಬಹಳ ಹರ್ಟ್ ಆಗುತ್ತದೆ. ಜೆಟ್ಟವರನ್ನ, ಕೆಟ್ಟದ್ದನ್ನ ನೋಡಿದರೇನೆ ದೂರ ಇರುವವಳು ನಾನು. ಯಾರಿಗೂ ತೊಂದರೆ ಕೊಟ್ಟವಳಲ್ಲ. ಪರಿಷತ್ ನಲ್ಲಿ ಅದನ್ನ ಯಾರೂ ಖಂಡಿಸಲಿಲ್ಲ. ಎಲ್ಲರೂ ಧೃತರಾಷ್ಟ್ರರಾದರು ಎಂದು ಬೇಸರ ಹೊರ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *