Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಪಿಳ್ಳೇಕೆರೆನಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಿಸಿ : ಶಾಸಕ ವೀರೇಂದ್ರ ಸೂಚನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.23 : ಪಿಳ್ಳೇಕೆರೆನಹಳ್ಳಿ ಗ್ರಾಮದ ಬಳಿ ಸ್ಕೈವಾಕರ್ ನಿರ್ಮಿಸುವ ಬದಲಾಗಿ ಅಂಡರ್ ಪಾಸ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸೂಚಿಸಿದ್ದಾರೆ.

ಪಿಳ್ಳೇಕೆರೆನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 13 ಹಾದು ಹೋಗಿದ್ದು, ಈ ರಸ್ತೆ ಮೇಲ್ದರ್ಜೆಗೇರಿಸುವ ಸಮಯದಲ್ಲಿ ಒಂದು ಅಂಡರ್ ಪಾಸ್ ನಿರ್ಮಾಣ ಮಾಡುವುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಆಸ್ವಾಸನೆ ನೀಡಿರುತ್ತಾರೆ. ಆದರೆ ಹೈವೇ ಪೂರ್ಣಗೊಂಡರೂ ಸಹ ಅಂಡರ್ ಪಾಸ್‌ ನ್ನು ನಿರ್ಮಾಣ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿರುತ್ತದೆ. ಈ ಕಾರಣದಿಂದಾಗಿ ಗ್ರಾಮಸ್ಥರು ಅಂಡರ್ ಪಾಸ್ ನಿರ್ಮಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ಈ ಭಾಗದ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಮಾತ್ರ ನಡೆಯಲೇ ಇಲ್ಲ. ಇದರಿಂದಾಗಿ ಇಲ್ಲಿನ ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಶಾಸಕ ವೀರೇಂದ್ರ ಅವರಲ್ಕಿಯೂ ಸಹಾ ಮನವಿ ಸಲ್ಲಿಸಿದ್ದರು.

ಈ ಮನವಿಗೆ ಸ್ಪಂದಿಸಿದ ಶಾಸಕರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಕೂಡಲೇ ಇಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಸೂಚಿಸಿದ್ದಾರೆ.

ಶಾಸಕರು ನೀಡಿರುವ ಪತ್ರದ ಸಾರಾಂಶ :
ಪಿಳ್ಳೇಕೆರೇನಹಳ್ಳಿ ಬಳಿ ಸ್ಕೈ ವಾಕರ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಹೋಗಿರುತ್ತಾರೆ. ಈ ಊರಿನ ಹತ್ತಿರ ಸೈವಾಕರ್ ನಿರ್ಮಾಣ ಮಾಡಿದರೆ ಕೆಲವು ವ್ಯಕ್ತಿಗಳು ಮದ್ಯಪಾನ ಮಾಡುವುದು, ಗಾಂಜ ಸೇದುವುದು, ರಾತ್ರಿವೇಳೆ ಗಲಾಟೆ ಮಾಡುವುದು, ಕಾನೂನು ಬಾಹಿರ ಚಟುಟಿಕೆಗಳನ್ನು ಮಾಡುವುದು ಮತ್ತು ಮಲಮೂತ್ರ ವಿಸರ್ಜನೆ ಮಾಡುವುದರಿಂದ ಈ ಭಾಗದಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ, ಮಹಿಳೆಯರಿಗೆ, ಶಾಲಾ ಮಕ್ಕಳಿಗೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮತ್ತು ಹಿರಿಯ ನಾಗರೀಕರು ಹಾಗೂ ಶವಸಂಸ್ಕಾರಕ್ಕೆ ಸ್ಕೈ ವಾಕರ್ ಮೇಲೆ ಓಡಾಡಲು ಹಾಗೂ ದನಕರುಗಳಿಗೆ ಓಡಾಡಲು ತೊಂದರೆ ಉಂಟಾಗುತ್ತದೆ. ಆದ್ದರಿಂದ ತಾವುಗಳು ಸ್ಕೈ ವಾಕರ್ ಯೋಜನೆಯನ್ನು ಕೈಬಿಟ್ಟು 2.5 ಮೀ. ಅಂಡರ್ ಪಾಸ್ ನಿರ್ಮಾಣ ಮಾಡಿಕೊಡಬೇಕೆಂದು ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...