Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನದ ಗಣಿಗಾರಿಕೆ ಪುನರಾರಂಭಿಸಲು ಕೇಂದ್ರ ಸಚಿವರಿಗೆ ಶಾಸಕ ವೀರೇಂದ್ರ ಪಪ್ಪಿ ಮನವಿ

---Advertisement---

 

ಚಿತ್ರದುರ್ಗ. ಡಿ.24 : ಚಿತ್ರದುರ್ಗ ತಾಲ್ಲೂಕು ಇಂಗಳದಾಳಿನಿಂದ ಈ ಹಿಂದೆ ಕೈಗೊಳ್ಳಲಾಗುತ್ತಿದ್ದ ಚಿನ್ನದ ಗಣಿಗಾರಿಕೆ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಈ ಕುರಿತಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಳೆದ ಸೆಪ್ಟಂಬರ್ 09 ರಂದು ಮನವಿ ಪತ್ರ ಸಲ್ಲಿಸಿದ್ದರು.  1886 ರಲ್ಲಿ ಇಂಗಳದಾಳಿನಲ್ಲಿ ತಾಮ್ರದ ಗಣಿಗಾರಿಕೆ ಪ್ರಾರಂಭವಾಗಿತ್ತು, ಬಳಿಕ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಅವರು ಕೈಗೊಂಡ ಸರ್ವೆ ಬಳಿಕ ಇಂಗಳದಾಳು, ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಚಿನ್ನದ ನಿಕ್ಷೇಪವಿರುವುದನ್ನು ಗುರುತಿಸಿತ್ತು.

1972 ರಲ್ಲಿ ಇಂಗಳದಾಳು ತಾಮ್ರದ ಘಟಕ ಪ್ರಾರಂಭಗೊಂಡು, ಬಳಿಕ ಇದನ್ನು ಹಟ್ಟಿ ಚಿನ್ನದ ಗಣಿಯೊಂದಿಗೆ ವಿಲೀನಗೊಳಿಸಲಾಗಿತ್ತು.  1994 ರಲ್ಲಿ ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಚಿನ್ನದ ನಿಕ್ಷೇಪ ಇರುವುದನ್ನು ಖಚಿತಪಡಿಸಿಕೊಂಡು, ಈ ಭಾಗದಲ್ಲಿ ಹಟ್ಟಿ ಚಿನ್ನದ ಗಣಿಯ ಸಹಯೋಗದಲ್ಲಿ 2002 ರವರೆಗೂ ಗಣಿಗಾರಿಕೆ ನಡೆಸಲಾಗಿತ್ತು.  ಗಣಿ ತಜ್ಞರು ಮತ್ತು ಭೂವಿಜ್ಞಾನಿಗಳು ಅಜ್ಜನಹಳ್ಳಿ ಮತ್ತು ಜಿ.ಆರ್. ಹಳ್ಳಿ ಸುತ್ತಮುತ್ತ ಉತ್ತಮ ಪ್ರಮಾಣದಲ್ಲಿ ಚಿನ್ನದ ನಿಕ್ಷೇಪವಿದ್ದು, ಚಿನ್ನದ ಗಣಿಗಾರಿಕೆಗೆ ಸೂಕ್ತವಾಗಿದೆ ಎಂಬುದಾಗಿ ತಿಳಿಸಿದ್ದು, ಈ ಕುರಿತಂತೆ ಸಂಬಂಧಪಟ್ಟವರಿಂದ ಮತ್ತೊಮ್ಮೆ ಪರಿಶೀಲನೆ ನಡೆಸಿ, ಚಿತ್ರದುರ್ಗದ ಚಿನ್ನದ ಗಣಿಗಾರಿಕೆ ಘಟಕವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದರು.  ಇದೀಗ ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಜಿ. ಕಿಶನ್ ರೆಡ್ಡಿ ಅವರು ಕೂಡ ಸ್ಪಂದಿಸಿದ್ದು, ಚಿತ್ರದುರ್ಗ ಚಿನ್ನದ ಗಣಿಗಾರಿಕೆ ಘಟಕ ಪುನರಾರಂಭಿಸಲು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಚಿತ್ರದುರ್ಗ ಚಿನ್ನದ ಗಣಿಗಾರಿಕೆ ಪುನರಾರಂಭಕ್ಕೆ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಲ್ಲಿಸಿರುವ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment