Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಪ್ರಕೃತಿ ಶಾಲೆಯಲ್ಲಿ ಕ್ಯಾಲೆಂಡರ್ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 02 : ನಗರದ ಬಿ.ಎಲ್. ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025 ಕ್ಯಾಲೆಂಡರ್ ಉದ್ಘಾಟನಾ ಸಮಾರಂಭ ಹಾಗೂ ಪ್ರಕೃತಿ ಹಬ್ಬದ ಕ್ರೀಡಾಕೂಟ ನೆರವೇರಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಟಿ. ರಾಜು ಆಗಮಿಸಿದ್ದರು.
ಅಪರಾಧ, ಅಪಘಾತಗಳ ಮುಂಜಾಗ್ರತೆಯನ್ನು ವಹಿಸುವ ಬಗ್ಗೆ ಎಚ್ಚರಿಕೆಯ ಸಂದೇಶವನ್ನು ಮಕ್ಕಳಿಗೆ ಮತ್ತು ಪೋಷಕರಿಗೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ರೋಟೇರಿಯನ್ ಪಿ ಎಚ್ ಎಫ್ ಎಂ ಕೆ ರವೀಂದ್ರ ಸರ್ ಅವರು ವಹಿಸಿದ್ದರು.

ಪ್ರಾರ್ಥನೆಯನ್ನು ಸಹ ಶಿಕ್ಷಕಿಯಾದ ಶ್ರೀಮತಿ ಕವಿತಾ ಟಿ ಅವರು ಸುಸ್ವಾಗ್ಯವಾಗಿ ಹಾಡಿದರು.
ಸ್ವಾಗತವನ್ನು ಸಾಹ ಶಿಕ್ಷಕಿಯಾದ ಶಿಲ್ಪ ರವರು ಎಲ್ಲರನ್ನೂ ಸ್ವಾಗತಿಸಿದರು.

ಈ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಉದ್ಘಾಟನೆಯ ಜೊತೆಗೆ ಎಲ್ಲ ಪೋಷಕರಿಗೂ ಮತ್ತು ಮಕ್ಕಳಿಗೂ ಬಹುಮಾನ ವಿತರಣೆ ವನ್ನು ಮಾಡಲಾಯಿತು. ವಂದನಾರ್ಪಣೆಯನ್ನು ಶಾಲೆಯ ಕಾರ್ಯದರ್ಶಿಗಳಾದ ಕಾರ್ತಿಕ್ ಎಂ. ರವರು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ರೊಟೇರಿಯನ್ ಪಿ ಎಚ್ ಎಫ್ ಉಮೇಶ್ ವಿ ತುಪ್ಪದ, ರೊಟೇರಿಯನ್ ಪಿ ಎಚ್ ಎಫ್ ಮಾರುತಿ ಮೋಹನ್, ರೊಟೇರಿಯನ್ ಪಿ ಎಚ್ ಎಫ್ ಡಾಕ್ಟರ್ ಮಧುಸೂದನ್ ರೆಡ್ಡಿ, ಖಜಾಂಚಿಗಳಾದ ಶ್ರೀಮತಿ ಶ್ವೇತ ಕಾರ್ತಿಕ್, ಶ್ರೀಮತಿ ಸ್ವಾತಿ ಆನಂದ್, ನಮ್ಮ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಎಂ.ಎಸ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಅನಿ ಫಾತಿಮ ರವರು ನಡೆಸಿಕೊಟ್ಟರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...