Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ 6 ನಕ್ಸಲರ ಶರಣಾಗತಿ : ಕರ್ನಾಟಕ ನಕ್ಸಲ್ ಮುಕ್ತ..!

---Advertisement---

ಚಿಕ್ಕಮಗಳೂರು: ಜಿಲ್ಲಾಡಳಿತದ ಮುಂದೆ ನಾಳೆ ಮಕ್ಸಲರು ಶರಣಾಗಲಿದ್ದಾರೆ. ಈ ಮೂಲಕ ಕರ್ನಾಟಕವೂ ನಕ್ಸಲ್ ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ. ಆರು ನಕಸಲರು ನಾಳೆ ಶರಣಾಗುತ್ತೀವಿ ಎಂದೇ ಹೇಳಿದ್ದಾರೆ. ಹೀಗಾಗಿ ಈಗಾಗಲೇ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರು ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

 

ಶಾಂತಿಗಾಗಿ ನಾಗರಿಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ನಕ್ಸಲರ ಮನವೊಲಿಕೆ ಮಾಡಲಾಗಿದೆ. ಆರು ಜನರ ಮನವೊಲಿಕೆ ಮಾಡಿದ್ದು, ಮುಖ್ಯ ವಾಹಿನಿಗೆ ಕರೆ ತರಲು ಯಶಸ್ವಿಯಾಗಿದ್ದಾರೆ. ಆರು ಜನ ನಕ್ಸಲರು ನಾಳೆ ಶರಣಾಗುವುದು ಬಹುತೇಕ ಫಿಕ್ಸ್ ಆಗಿದೆ. ಇವರೆಲ್ಲ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಆಕ್ಟೀವ್ ಆಗಿದ್ದಂತ ನಕ್ಸಲರಾಗಿದ್ದಾರೆ. ಇವರನ್ನು ಶಾಂತಿಗಾಗಿ ನಾಗರಿಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಕಾಡಿನೊಳಗೆ ಭೇಟಿಯಾಗಿ, ಸಭೆ ನಡೆಸಿ ಮನವೊಲಿಸುವ ಕೆಲಸ ಮಾಡಿದ್ದಾರೆ. ಹಲವು ಬೇಡಿಕೆಗಳನ್ನು ನಕ್ಸಲರು ಇಟ್ಟಿದ್ದಾರೆ ಎನ್ನಲಾಗಿದ್ದು, ಅವರ ಮನವೊಲಿಸಿ, ಶರಣಾಗತಿಗೆ ತಯಾರು ಮಾಡಿದ್ದಾರೆ. ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ನಾಳೆ ಬೆಳಗ್ಗೆ 8 ರಿಂದ 9 ಗಂಟೆಯ ಒಳಗೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಕರ್ನಾಟಕ ಸೇರಿದ ಹೊರ ರಾಜ್ಯದ ಮೋಸ್ಟ್ ವಾಂಟೆಡ್ ನಕ್ಸಲರು ನಾಳೆ ಶರಣಾಗುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿರುವ ರಾಷ್ಟ್ರೀಯ ಗುಪ್ಯಚರ ಇಲಾಖೆಯ ಅಧಿಕಾರಿಗಳು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಶರಣಾಗುತ್ತಿರುವ ನಕ್ಸಲರ ಮಾಹಿತಿ ಇಲ್ಲಿದೆ ನೋಡಿ

* ಮುಂಡುಗಾರು ಲತಾ (ಶೃಂಗೇರಿ) * ವನಜಾಕ್ಷಿ (ಬಾಳೆಹೊಳೆ ಕಳಸ) * ಸುಂದರಿ (ದಕ್ಷಿಣ ಕನ್ನಡ) * ಮಾರಪ್ಪ ಅರೋಳಿ (ಕರ್ನಾಟಕ) * ವಸಂತ ಟಿ (ತಮಿಳುನಾಡು) * ಎನ್.ಜೀಶಾ (ಕೇರಳ)
*

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment