Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಿಗೆ ಕಾಲಕಾಲಕ್ಕೆ “ಎ” ಅನ್ನಾಂಗದ ದ್ರಾವಣ ಕುಡಿಸಿ, ಇರುಳುಗಣ್ಣು ಬಾರದಂತೆ ನೋಡಿಕೊಳ್ಳಿ : ಡಿಹೆಚ್‍ಇಒ ನಾಯಕ್

---Advertisement---

ಚಿತ್ರದುರ್ಗ. ಜ.08: ಮಕ್ಕಳಿಗೆ ಕಾಲಕಾಲಕ್ಕೆ ಎ ಅನ್ನಾಂಗದ ದ್ರಾವಣ ಕುಡಿಸಿ ಇರುಳುಗಣ್ಣು ಬಾರದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ತಿಳಿಸಿದರು.

ಇಲ್ಲಿನ ಮಾರುತಿ ನಗರ ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಗೋಪಾಲಪುರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ “ಎ” ಅನ್ನಂಗ ದ್ರಾವಣ 01 ರಿಂದ 5 ವರ್ಷದ ಒಳಗಿನ ಮಕ್ಕಳಿಗೆ ಕೊಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಟಮಿನ್ “ಎ” ದೇಹದಲ್ಲಿ ನಾನಾ ಜೈವಿಕ ಪ್ರಕ್ರಿಯೆಯಲ್ಲಿ ಉಪಯೋಗಿಸಲ್ಪಡುವ ರೆಟಿನೋಲ್ ಅಥವಾ ರೆಟಿನೋಯಿಕ್ ಆಸಿಡ್ ಮತ್ತು ಇತರ ಪರಸ್ಪರ ಹೋಲಿಕೆಯೊಳ್ಳ ರಾಸಾಯನಿಕ ಪದಾರ್ಥಗಳ ಸಮೂಹವೇ ವಿಟಮಿನ್ ಎ ಅನ್ನಾಂಗವಾಗಿದೆ. ಇದು ದ್ರಾವಣ ರೂಪದಲ್ಲಿರುತ್ತದೆ. ವಿಟಮಿನ್ “ಎ” ಕೊರತೆಯು ವಿಟಮಿನ್ “ಎ”ಯ ಆಹಾರ ಸೇವನೆ ಮಾಡದಿರುವುದರಿಂದ ಉಂಟಾಗುತ್ತದೆ ಎಂದರು.

ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ರಾತ್ರಿ ಕುರುಡುತನವು ವಿಟಮಿನ್ ಎ ಕೊರತೆಯ ಮೊದಲ ಚಿಹ್ನೆಗಳಲ್ಲಿ ಒಂದಾಗಿದೆ. ಅದರ ತೀವ್ರ ಸ್ವರೂಪಗಳಲ್ಲಿ, ವಿಟಮಿನ್ ಎ ಕೊರತೆಯು ಕಾರ್ನಿಯಾವನ್ನು ತುಂಬಾ ಒಣಗಿಸುವ ಮೂಲಕ ಕುರುಡುತನಕ್ಕೆ ಕೊಡುಗೆ ನೀಡುತ್ತದೆ. ಹೀಗಾಗಿ ರೆಟಿನಾ ಮತ್ತು ಕಾರ್ನಿಯಾವನ್ನು ಹಾನಿಗೊಳಿಸುತ್ತದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ನೂರು ದಿನಗಳ ಕ್ಷಯರೋಗ ಅಭಿಯಾನ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ತಾಲ್ಲೂಕು ಆಶಾ ಬೋಧಕಿ ತಬಿತ, ಶಾಲಾ ಶಿಕ್ಷಕರಾದ ಕಲ್ಪನಾ, ಶ್ವೇತಾ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ರೂಪ, ಭಾಗ್ಯಮ್ಮ, ಲಕ್ಕಮ್ಮ, ಅಂಗನವಾಡಿ ಕಾರ್ಯಕರ್ತೆಯಾದರಾದ ಶಿಲ್ಪ, ಸುಮಂಗಳ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...