Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವೈಕುಂಠ ಏಕಾದಶಿ ಹಿನ್ನೆಲೆ : ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್ ಪಡೆಯಲು ಬಂದು 7 ಜನ ಸಾವು : ಕಾಲ್ತುಳಿತಕ್ಕೆ ಕಾರಣವಾದರೂ ಏನು..?

---Advertisement---

ನಾಳೆ (ಶು.10) ವೈಕುಂಠ ಏಕಾದಶಿ ಇದೆ. ಈ ಏಕಾದಶಿಯಂದು ಸತ್ತರೆ ನೇರ ಸ್ವರ್ಗ ಪ್ರಾಪ್ತಿಯಾಗುತ್ತೆ ಎಂಬ ಮಾತಿದೆ. ಅಲ್ಲದೆ ವೈಕುಂಠ ಏಕಾದಶಿಯಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವ ಭಕ್ತರ ಸಂಖ್ಯೆಯೂ ಹೆಚ್ಚಾಗಿರುತ್ತದೆ. ತಿರುಪತಿಗೆ ಹೋಗುವವರು ಇದೇ ಸಮಯಕ್ಕೆ ಪ್ಲ್ಯಾನ್ ಮಾಡಿಕೊಳ್ಳುತ್ತಾರೆ. ಈ ಹಿನ್ನೆಲೆ ತಿರುಪತಿಯಲ್ಲಿ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತದಿಂದ ಏಳು ಜನ ಅಸುನೀಗಿದ್ದಾರೆ.

ಶುಕ್ರವಾರ, ಜನವರಿ 10ರಂದು ವೈಕುಂಠ ಏಕಾದಶಿ ಇದೆ. ತಿರುಮಲ ಟ್ರಸ್ಟ್ ಜನವರಿ 12ರ ತನಕ ವೈಕುಂಠ ದ್ವಾರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 1 ಲಕ್ಷದ 20 ಸಾವಿರ ಟೋಕನ್ ಹಂಚಿಕೆಯಾಗುತ್ತಿದೆ. ಕೋಟ್ಯಾಂತರ ಭಕ್ತರು ತಿರುಪತಿಗೆ ಹೋಗಿ, ಬರುತ್ತಾ ಇರುತ್ತಾರೆ. ಆದರೆ ಕಡಿಮೆ ಸಂಖ್ಯೆಯಲ್ಲಿ ಟಿಕೆಟ್ ಇರುವ ಕಾರಣ ಭಕ್ತರು ಟಿಕೆಟ್ ಕೊಳ್ಳಲು ನುಗ್ಗಿ ಬಂದಿದ್ದಾರೆ.

ದೇವಸ್ಥಾನದ ಮಂಡಳಿ ದಿನಕ್ಕೆ 40 ಸಾವಿರದಂತೆ ಟಿಕೆಟ್ ಹಂಚಲು ನಿರ್ಧರಿಸಿದೆ. 9 ಕಡೆ 94 ಕೌಂಟರ್ ತೆರೆಯಲಾಗಿದೆ. ವೈಕುಂಠ ದ್ವಾರ ದರ್ಶನದ ಟಿಕೆಟ್ ಗಳನ್ನು ವಿತರಣೆ ಮಾಡಲಾಗುತ್ತಿದ್ದು, ಟಿಕೆಟ್ ಕೊಡುತ್ತಿದ್ದ ಸಿಬ್ಬಂದಿಯೊಬ್ಬ ಅಸ್ಚಸ್ಥಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಗೇಟ್ ಓಪನ್ ಮಾಡುತ್ತಿದ್ದಂತೆ ಜನ ನುಗ್ಗಿ ಬಂದಿದ್ದಾರೆ. ಈ ವೇಳೆ ಕಾಲ್ತುಳಿತಕ್ಕೆ ಏಳು ಜನ ಸಾವನ್ನಪ್ಪಿದ್ದಾರೆ.

ತಿರುಪತಿ ತಿಮ್ಮಪ್ಪನ ಸನ್ನಿದಿಯಲ್ಲಿ ಈ ರೀತಿ ಆದದ್ದು ಇದೇ ಮೊದಲು. ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ವಿಚಾರ ಕೇಳಿ ಶಾಕ್ ಆಗಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಂದು ತಿರುಪತಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಹಾಗೇ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...