Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ಟಾಪ್ ಟೆನ್ ಒಳಗೆ : ಡಿಡಿಪಿಐ ಎಂ.ಆರ್.ಮಂಜುನಾಥ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಜನವರಿ. 09 : ಭಯವಿಲ್ಲದೆ ಮಕ್ಕಳು ಪರೀಕ್ಷೆ ಬರೆಯುವಂತ ಆತ್ಮವಿಶ್ವಾಸ ಮೂಡಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಸಮಾಜ ವಿಜ್ಞಾನ ಶಿಕ್ಷಕರುಗಳ ಕ್ಲಬ್ ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ
ಸಮಾಜ ವಿಜ್ಞಾನ ಶಿಕ್ಷಕರುಗಳ ಶೈಕ್ಷಣಿಕ ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದರು.

ನಿಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಠ್ಯವನ್ನು ಬೋಧಿಸಿದಾಗ ಹತ್ತನೆ ತರಗತಿ ಪರೀಕ್ಷೆಯಲ್ಲಿ ಫಲಿತಾಂಶ ಸುಧಾರಣೆಯಾಗಲಿದೆ. ಹಿಂದುಳಿದ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು, ಶ್ರಮಿಕರು, ಗ್ರಾಮೀಣ ಮಕ್ಕಳೆ ಜಾಸ್ತಿಯಿದ್ದಾರೆ. ವೇಳಾಪಟ್ಟಿ ಪ್ರಕಾರ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸಲಾಗುತ್ತಿದೆ. ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ಟಾಪ್ ಟೆನ್ ಒಳಗೆ ಬರಬೇಕು. ಜಿಲ್ಲೆಯಲ್ಲಿ ಅದ್ಬುತವಾದ ಶಿಕ್ಷಕರುಗಳಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವ ಕೆಲಸ ನಿಮ್ಮಿಂದಾಗಬೇಕು. ಪೋಷಕರುಗಳ ಸಭೆ ನಡೆಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿದಾಗ ಮಾತ್ರ ಗುಣಮಟ್ಟದ ಫಲಿತಾಂಶ ಸಿಗುತ್ತದೆ ಎಂದರು.

ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಪ್ರಶಾಂತ್ ಮಾತನಾಡಿ ಹತ್ತನೆ ತರಗತಿ ಪರೀಕ್ಷೆ ಫಲಿತಾಂಶ ಸುಧಾರಣೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರುಗಳ ಪಾತ್ರ ಪ್ರಮುಖವಾದುದು. ಮಕ್ಕಳನ್ನು ಕೇವಲ ಪಠ್ಯಕ್ಕಷ್ಟೆ ಸೀಮಿತಗೊಳಿಸಬಾರದು. ಶಿಕ್ಷಣದ ಜೊತೆ ಸಂಸ್ಕಾರ, ಮೌಲ್ಯವನ್ನು ಕಲಿಸಬೇಕಿದೆ. ಈಗಿನಿಂದಲೆ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡಬೇಕಿದೆ ಎಂದು ಹೇಳಿದರು.

ವಿದ್ಯಾಧಿಕಾರಿಗಳಾದ ಎನ್.ಆರ್.ತಿಪ್ಪೇಸ್ವಾಮಿ, ಸಿದ್ದಪ್ಪ, ಡಿ.ವೈ.ಪಿ.ಸಿ.ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ವಿಷಯ ಪರಿವೀಕ್ಷಕರುಗಳಾದ ಶಿವಣ್ಣ, ಚಂದ್ರಣ್ಣ, ಗೋವಿಂದಪ್ಪ, ಮಹಲಿಂಗಪ್ಪ, ಸಮಾಜ ವಿಜ್ಞಾನ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಆರ್.ನಾಗರಾಜ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಶ್ರೀನಿವಾಸ್, ಗೋವಿಂದಪ್ಪ, ಡಿ.ಎಸ್.ಪಾಲಯ್ಯ ಇನ್ನು ಅನೇಕರು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment