Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒತ್ತುವರಿ ತೆರವುಗೊಳಿಸಿ : ಅಹಿಂದ ಚಳುವಳಿ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ರಸ್ತೆ ಅಗಲೀಕರಣ ಹಾಗೂ ಒತ್ತುವರಿಯಾಗಿರುವ ರಾಜ ಕಾಲುವೆಗಳನ್ನು ತೆರವುಗೊಳಿಸುವಂತೆ ಅಹಿಂದ ಚಳುವಳಿಯಿಂದ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಚಳ್ಳಕೆರೆ ಟೋಲ್‍ಗೇಟ್‍ನಿಂದ ಜೆ.ಎಂ.ಐ.ಟಿ. ಸರ್ಕಲ್‍ವರೆಗೆ ರಸ್ತೆ ಅಗಲೀಕರಣಗೊಳಿಸುವ ಸಂಬಂಧ ಅನೇಕ ಸಭೆಗಳು ನಡೆದಿರುವುದನ್ನು ಬಿಟ್ಟರೆ ರಸ್ತೆ ಅಗಲೀರಕಣ ಮಾತ್ರ ಇನ್ನು ಆಗಿಲ್ಲ. ಹೊಳಲ್ಕೆರೆ ರಸ್ತೆ, ಮೆದೇಹಳ್ಳಿ ರಸ್ತೆ, ಕೋಟೆ ರಸ್ತೆ ಕಿಷ್ಕಿಂದೆಯಾಗಿದ್ದು, ವಾಹನಗಳ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಶೀಘ್ರವೇ ರಸ್ತೆ ಅಗಲೀಕರಣವಾಗಬೇಕು. ನಗರದ ಬಹುತೇಕ ಕಡೆ ರಾಜಕಾಲುವೆಗಳು ಒತ್ತುವರಿಯಾಗಿರುವುದರಿಂದ ಮಳೆ ನೀರು ಹರಿದು ಹೋಗದೆ ರಸ್ತೆಗೆ ನುಗ್ಗುತ್ತದೆ. ಚರಂಡಿ ವ್ಯವಸ್ಥೆ ಸರಿಯಿಲ್ಲ. ಐತಿಹಾಸಿಕ ಚಿತ್ರದುರ್ಗ ಕೋಟೆ, ಮುರುಘಾಮಠ, ಚಂದ್ರವಳ್ಳಿ, ಆಡುಮಲ್ಲೇಶ್ವರ ವೀಕ್ಷಣೆಗೆ ಹೊರಗಿನಿಂದ ಪ್ರವಾಸಿಗರು ಬರುವುದುಂಟು. ಆದರೆ ರಸ್ತೆ ಮಾತ್ರ ಇನ್ನೂ ಓಬಿರಾಯನ ಕಾಲದಂತಿದೆ. ಪಾದಚಾರಿಗಳಿಗೆ ಫುಟ್‍ಪಾತ್ ಇಲ್ಲ. ಇರುವ ರಸ್ತೆಯಲ್ಲಿಯೇ ವಾಹನಗಳ ನಿಲುಗಡೆಯಾಗುತ್ತಿರುವುದರಿಂದ ಸಂಚಾರ ದಟ್ಟಣೆ ಜಾಸ್ತಿಯಾಗುತ್ತಿದೆ. ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ರಸ್ತೆ ಅಗಲೀಕರಣಕ್ಕೆ ಹೆಚ್ಚಿನ ಗಮನ ಕೊಡಬೇಕು. ಇಲ್ಲವಾದಲ್ಲಿ ಮುಂದಿನ ಪೀಳಿಗೆ ಶಪಿಸುತ್ತಾರೆಂದು ಅಹಿಂದ ಚಳುವಳಿ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿತು.

ಅಹಿಂದ ಚಳುವಳಿ ಜಿಲ್ಲಾ ಮುಖ್ಯ ಸಂಚಾಲಕ ಟಿ.ಕೆಂಚಪ್ಪ, ಸಹ ಸಂಚಾಲಕ ಸತ್ಯಪ್ಪ ಮಲ್ಲಾಪುರ, ಸಂಚಾಲಕ ಅನಂತಕುಮಾರ್, ಲೇಖಕ ಹೆಚ್.ಆನಂದಕುಮಾರ್
ಮಲ್ಲಿಕಾರ್ಜುನ, ತಿಪ್ಪೇಸ್ವಾಮಿ, ರಾಜಪ್ಪ, ಕುಬೇಂದ್ರನಾಯ್ಕ, ಮಹಿಳಾಧ್ಯಕ್ಷೆ ಜ್ಯೋತಿಲಕ್ಷ್ಮಿ, ವಿನೋದಮ್ಮ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...