Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆದರ್ಶ ಸೌಹಾರ್ದ ಪತ್ತಿನ ಸಹಕಾರಿಯಲ್ಲಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 12 : ನಗರದ ಆದರ್ಶ ಸೌಹಾರ್ದ ಪತ್ತಿನ ಸಹಕಾರಿ ನಿ. ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹಕಾರಿಯ ಅಧ್ಯಕ್ಷರಾದ ಡಿ.ಆರ್. ತಿಪ್ಪೇಸ್ವಾಮಿ ಮಾತನಾಡಿ, ಮನುಷ್ಯ, ಮನುಷ್ಯನನ್ನು ಪ್ರೀತಿಸುವುದೇ ನಿಜ ಧರ್ಮ. ಧರ್ಮದ ಸತ್ವ ಅಡಗಿರುವುದೇ ಪ್ರೀತಿಯಲ್ಲಿ ಎಂದು ಹೇಳಿದ್ದ ವಿವೇಕಾನಂದರು, ಸರ್ವಧರ್ಮ ಸಮನ್ವಯವನ್ನು ಬಯಸಿದ್ದರು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ರಘುರಾಮ್ ರೆಡ್ಡಿಯವರು ಮಾತನಾಡಿ, ವಿವೇಕಾನಂದರು ಸ್ಫೂರ್ತಿಯ ಚಿಲುಮೆಯಾಗಿದ್ದರು. ಭಾರತದ ಯುವ ಸಮುದಾಯಕ್ಕೆ ಚೈತನ್ಯ ನೀಡಿದ ಮಹಾಚೇತನ. ತನ್ನ ಸಣ್ಣ ಪ್ರಾಯದಲ್ಲೇ ದೊಡ್ಡ ಸಾಧನೆ ಮಾಡಿದ ಶ್ರೇಷ್ಠ ವ್ಯಕ್ತಿತ್ವ ಅವರದ್ದು.
ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್ಯವೈಶ್ಯ ಸಂಘದ ನಿರ್ದೇಶಕರಾದ ಟಿ ವಿ ಸುರೇಶ್ ಗುಪ್ತಾರವರು, ವೀರಶೈವ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಎಸ್ ಪರಮೇಶ್ವರ್, ಚಿತ್ರದುರ್ಗ ತಾಲ್ಲೂಕು ಸಹಕಾರ ಭಾರತೀಯ ಅಧ್ಯಕ್ಷರಾದ ಕೆ ಎಸ್ ಚಂದ್ರಮೋಹನ್, ಆರ್ಯವೈಶ್ಯ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾದ ಪಿಎನ್ ಮೋಹನ್ ಕುಮಾರ್ ಗುಪ್ತ, ಸಹಕಾರಿಯ ಉಪಾಧ್ಯಕ್ಷರಾದ ಎಸ್ ವೇದಮೂರ್ತಿ, ನಿರ್ದೇಶಕರಾದ ಎಮ್ ಕೆ ಮಲ್ಲಿಕಾರ್ಜುನ್, ವಿ. ಎಸ್. ಮಲ್ಲಿಕಾರ್ಜುನ್, ಜೆ. ಮಧುಸೂಧನ್, ಎಂ ವೆಂಕಟೇಶ್, ಎಸ್. ಮೂರ್ಕಣಪ್ಪ ಹಾಗು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment