Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಉಸ್ತುವಾರಿಯನ್ನ ಶ್ರೀರಾಮುಲುಗೆ ನೀಡಿ : ಸೋಮಶೇಖರ್ ರೆಡ್ಡಿ ಮಾತಿಗೆ ಆನಂದ್ ಸಿಂಗ್ ಏನಂದ್ರು..?

Facebook
Twitter
Telegram
WhatsApp

ಬಳ್ಳಾರಿ : ಪರಿಷತ್ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೀತಾ ಇದೆ. ಇಂದು ಜಿಲ್ಲೆಯಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾದ ಬಿಜೆಪಿ ನಾಯಕರು, ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸೋಮಶೇಖರ್ ರೆಡ್ಡಿ ಬಳ್ಳಾರಿ ಉಸ್ತುವಾರಿ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಅದೇ ಸಭೆಯಲ್ಲಿ ಆನಂದ್ ಸಿಂಗ್ ಕೂಡ ಭಾಗಿಯಾಗಿದ್ದರು. ಅವರ ಮುಂದೆಯೇ ಮಾತನಾಡಿದ ಸೋಮಶೇಖರ್ ರೆಡ್ಡಿ, ವಿಜಯನಗರ ಜಿಲ್ಲೆ ಆದ್ಮೇಲೆ ಆನಂದ್ ಸಿಂಗ್ ಬ್ಯುಸಿಯಾಗಿದ್ದಾರೆ. ಅಖಂಡ ಬಳ್ಳಾರಿ ಉಸ್ತುವಾರಿ ಅವರಿಗೆ ಭಾರವಾಗಿದೆ. ಒತ್ತಡ ಜಾಸ್ತಿ ಆಗಿದೆ. ಹೀಗಾಗಿ ಬಳ್ಳಾರಿ ಉಸ್ತುವಾರಿಯನ್ನ ಸಚಿವ ಶ್ರೀರಾಮುಲು ಅವರಿಗೆ ನೀಡಿ ಎಂದಿದ್ದಾರೆ.

ವಿಜಯನಗರ ಜಿಲ್ಲೆ ಆದಮೇಲೆ ಆನಂದ್ ಸಿಂಗ್ ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ ಬಳ್ಳಾರಿ ಉಸ್ತುವಾರಿಯನ್ನೇ ಮರೆತಿದ್ದಾರೆ. ಶ್ರೀರಾಮುಲುಗೆ ನೀಡಿ ಅವರ ಮೇಲಿನ ಭಾರ ಕಡಿಮೆ ಮಾಡಬೇಕು ಎಂದಿದ್ದಾರೆ.

ಬಳಿಕ ಅದೇ ಸಭೆಯಲ್ಲಿ ನಾತನಾಡಿದ ಆನಂದ್ ಸಿಂಗ್, ಬಿಜೆಪಿ ಶಿಸ್ತಿನ ಪಕ್ಷ. ಕೆಲವೊಂದು ಲೋಪ ದೋಷವಿದೆ. ಕೆಲವರಿಗೆ ಅಧಿಕಾರದ ದಾಹ ಇರಬಹುದು. ಕೆಲವೊಂದು ವಾದ ವಿವಾದ ಮಾಡಲು ಅದರದ್ದೇ ವೇದಿಕೆ ಇರುತ್ತೆ. ಅದನ್ನ ಅಲ್ಲಿಯೇ ಚರ್ಚೆ ಮಾಡಬೇಕು ಎಂದು ಮಾತಿನಲ್ಲೇ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!