Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊಪ್ಪಳ | ಬೀರಪ್ಪ ಅಂಡಗಿ ಅವರಿಗೆ ವಿವೇಕ ಸಿರಿ ಪ್ರಶಸ್ತಿ ಪ್ರದಾನ

---Advertisement---

ಸುದ್ದಿಒನ್, ಕೊಪ್ಪಳ, ಜನವರಿ. 13 : ತಾಲೂಕಿನ ಗುಡದಳ್ಳಿ ಗ್ರಾಮದ ಸ್ವಾಮಿ ವಿವೇಕಾನಂದ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆಯ ಅಡಿಯಲ್ಲಿ ಇರುವ ಸ್ವಾಮಿ ವಿವೇಕಾನಂದ ಶಾಲೆಯ 14ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿವೇಕ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ರವಿವಾರ ಜರುಗಿತು.

ಕಾರ್ಯಕ್ರಮವನ್ನು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷರಾದ ಶಾಹಿದ್ ಹುಸೇನ ತಹಶಿಲ್ದಾರ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಹೊಳೆಯಾಚೆ ವಹಿಸಿದ್ದರು.

ಇದೇ ಸಮಯದಲ್ಲಿ ಈ ವರ್ಷದ ವಿವೇಕ ಸಿರಿ ಪ್ರಶಸ್ತಿಯನ್ನು ಶಿಕ್ಷಣ ಮತ್ತು ಹೋರಾಟದ ಸೇವೆಗಾಗಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ, ಸಮಾಜಿಕ ಸೇವೆಗಾಗಿ ಮಾರ್ಕಂಡೆಪ್ಪ ಏಣಿಗಿ,ಸಂಗೀತ್ರದಲ್ಲಿ ತುಳಸೋಜಿರಾವ್ ಚೌವಾಣ,ಆಯುರ್ವೇದಿಕ್ ಸೇವೆಗಾಗಿ ಮೂರ್ತೇಪ್ಪ ಜಂತ್ರಿ,ವನ್ಯಜೀವಿಗಳ ಕ್ಷೇತ್ರಕ್ಕಾಗಿ ವಸಂತ ಶಿಳ್ಳೆಕ್ಯಾತರ ಅವರಿಗೆ ನೀಡಿದೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ.ಈ ಪ್ರಶಸ್ತಿಯನ್ನು ಕಲರವ ಶಿಕ್ಷಕರ ಸೇವಾ ಬಳಗಕ್ಕೆ ಅರ್ಪಣೆ ಮಾಡಲಾಗುತ್ತದೆ.ವಿದ್ಯಾರ್ಥಿಗಳು ಸಮಯವನ್ನು ಸರಿಯಾದ ರೀತಿಯಲ್ಲಿ ಬಳಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಶಿವಲಿಂಗಪ್ಪ ತಿಪ್ಪನ್ನವರ,ಕಾರ್ಯದರ್ಶಿ ರಮೇಶ ಹೊಳೆಯಾಚೆ,ಮುಖಂಡರಾದ ಕನಕಪ್ಪ ಮುದ್ಲಾಪೂರ,ಗುಡದಪ್ಪ ದೊಡ್ಡಮನಿ, ಪಾಲಕ್ಷಯ್ಯಾ ಇಂದರಗಿಮಠ, ಬಸವರಾಜ ಗೊಲ್ಲರ, ಫಕೀರಪ್ಪ ಅಜ್ಜಿ,ಸಿ.ಆರ್.ಪಿ.ಸಂಜೀವಕುಮಾರ, ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಕಾಶಿನಾಥ,ಹನುಮಂತಪ್ಪ ಕುರಿ,ಅಣ್ಣಪ್ಪ ಹಳ್ಳಿ,ಶರಣಪ್ಪ ರಡ್ಡೇರ,ಮಲ್ಲಪ್ಪ ಗುಡದನ್ನವರ,ಗುರುಸ್ವಾಮಿ.ಆರ್.,ವಿರೇಶ ಕೌಟಿ,ಹುಲುಗಪ್ಪ ಭಜಂತ್ರಿ,ಮದುಸೂಧನ ಡೊಳ್ಳಿನ ಮುಂತಾದವರು ಹಾಜರಿದ್ದರು.

ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕರಾದ ನಾಗರಾಜ ಬಡಿಗೇರ ನಿರೂಪಸಿದರು. ಶಿಕ್ಷಕರಾದ ಶಿವಪ್ಪ ಜೋಗಿನ ಸ್ವಾಗತಿಸಿ,ಫಕೀರಪ್ಪ ಅಜ್ಜಿ ವಂದಿಸಿದರು.
ಪೋಟೊ:ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ವಿವೇಕ ಸಿರಿ ಪ್ರಶಸ್ತಿ ಪ್ರದಾನ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment