Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿ ಸಂಕ್ರಾಂತಿ ಸಂಭ್ರಮ : ಯಾರೆಲ್ಲಾ ಜೊತೆಯಾದ್ರೂ ಗೊತ್ತಾ..?

---Advertisement---

ಇಂದು ಮಕರ ಸಂಕ್ರಾಂತಿ ಸಂಭ್ರಮ. ನಾಡಿನೆಲ್ಲೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಕೂಡ ಸಂಕ್ರಾಂತಿ ಸಡಗರದಲ್ಲಿ ಮುಳುಗೆದ್ದಿದ್ದಾರೆ. ಅದರಲ್ಲೂ ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯವನ್ನು ಕನ್ನಡದಲ್ಲಿಯೇ ತಿಳಿಸಿದ್ದಾರೆ. ಇದು ಎಲ್ಲರಿಗೂ ಖುಷಿ ತಂದಿದೆ. ಪ್ರಧಾನಿ ಮೋದಿ ಅವರ ಜೊತೆಗೆ ಸೆಲೆಬ್ರೆಟಿಗಳು ಕೂಡ ಕೈಜೋಡಿಸಿದ್ದಾರೆ.

ಪ್ರಧಾನಿ ಮೋದಿ ಜೊತೆಗೆ ಮೆಗಾಸ್ಟಾರ್ ಚಿರಂಜೀವಿ, ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕೇಂದ್ರ ಸಚುವ ಕಿಶನ್ ರೆಡ್ಡಿ ಅವರು ಭಾಗಿಯಾಗಿದ್ದರು. ಈ ಮೂಲಕ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ನಟ, ನಟಿಯರು, ರಾಜಕೀಯ ಗಣ್ಯರು ಪಾಲ್ಗೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿಯವರು ಹಾಗೂ ಮೆಗಾಸ್ಟಾರ್ ಚಿರಂಜೀವಿಯವರು ಅಕ್ಕ- ಪಕ್ಕವೇ ಕುಳಿತು ನೃತ್ಯ ಮಾಡುವುದನ್ನು ವೀಕ್ಷಣೆ ಮಾಡಿದರು. ಇದೇ ಮೊದಲ ಬಾರಿಗೆ ಮೋದಿಯವರ ಜೊತೆ ಚಿರಂಜೀವಿಯವರು ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಈ ಹಬ್ಬದಲ್ಲಿ ಹಲವು ವಿಶೇಷ ಆಚರಣೆಗಳನ್ನು ಆಚರಿಸಲಾಗುತ್ತದೆ. ಪೊಂಗಾಲ್ ಹಬ್ಬದ ದಿನ ಪ್ರಧಾನಿ ಮೋದಿ ಅವರು ನೂರಾರು ಜನರ ಸಮ್ಮುಖದಲ್ಲಿ ಬೋಗಿಗೆ ತುಪ್ಪ ಸುರಿದು ಆಚರಣೆ ಮಾಡಿದರು. ಎಲ್ಲರಿಗೂ ಒಳಿತನ್ನು ಬಯಸಿದರು. ಹಬ್ಬದ ವಿಶೇಷವಾಗಿ ಪ್ರಧಾನಿ ಮೋದಿಯವರು ಹಸುವಿಗೆ ಊಟ ಮಾಡಿಸಿ, ವಿಶೇಷ ಪೂಜೆ ಸಲ್ಲಿಸಿದರು. ಸಿಹಿ ತಿನಿಸು ಹಾಗೂ ಬಾಳೆ ಹಣ್ಣನ್ನು ಕೊಟ್ಟು ಗೋ ಪೂಜೆ ಮಾಡಿ ಆಶೀರ್ವಾದ ಪಡೆದರು. ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರಧಾನ ಮಂತ್ರಿ ಮೋದಿ ಚಾಲನೆ ನೀಡಿದರು. ಈ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ನಟ ಚಿರಂಜೀವಿ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...