Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಡಾ ಇಡಿ ರಾಜಕೀಯ ಪ್ರೇರಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಬೆಂಗಳೂರು, ಜನವರಿ 20 : ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.

ಹಣ ದುರುಪಯೋಗದ ಪ್ರಶ್ನೆ ಇಲ್ಲ :

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ :

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ :

ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

 

1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment