Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೋಡಲು ಡಿಕೆಶಿ ಓಡೋಡಿ ಬರ್ತಿದ್ದಾರೆ.. ತಪ್ಪಲ್ಲ.. ಆದರೆ : ಜೆಡಿಎಸ್ ಹೇಳಲು ಹೊರಟಿದ್ದೇನು..?

---Advertisement---

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಅದರಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರನಿಗೆ ಗಂಭೀರ ಗಾಯವಾಗಿದೆ. ಅದರಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಮೂಳೆ ಸಮಸ್ಯೆಯಾಗಿದೆ. ಜೋರು ಪೆಟ್ಟಾಗಿದೆ. ಹೀಗಾಗಿ ಆಸ್ಪತ್ರೆಗೆ ಅಡ್ಮಿಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ್, ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ, ಮಾಡಿ ಆರೋಗ್ಯ ವಿಚಾರಿಸಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ಮಾಡಿ ಪ್ರಶ್ನೆ ಮಾಡಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿ ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸಿಎಂ @DKShivakumar, ಸಚಿವ @BZZameerAhmedK ಸೇರಿದಂತೆ ಕಾಂಗ್ರೆಸ್ ನಾಯಕರುಗಳು ಓಡೋಡಿ ಹೋಗಿ ಸಚಿವೆಯ ಆರೋಗ್ಯ ವಿಚಾರಿಸಿ ಶೀಘ್ರ ಚೇತರಿಕೆಗೆ ಹಾರೈಸಿ ಬರುತ್ತಿದ್ದಾರೆ. ಇದು ತಪ್ಪಲ್ಲ.. ಆದರೆ

ಬೆಳಗಾವಿ, ಬಳ್ಳಾರಿ, ರಾಯಚೂರು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವುಗಳಾದಾಗ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ @laxmi_hebbalkar ಅವರಾಗಲಿ, ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್‌ ಆಗಲಿ ಅಥವಾ ಉಪಮುಖ್ಯಮಂತ್ರಿ ಡಿಕೆಶಿ ಆಗಲಿ ಒಮ್ಮೆಯೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಲೇ ಇಲ್ಲ. @INCKarnataka ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲ… ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯಕ್ಕೆ ಬಡವರು ಬಲಿಯಾದರೇ ಡೋಂಟ್‌ ಕೇರ್‌. ಕಾಂಗ್ರೆಸ್ ನಾಯಕರಿಗೆ ಆದರೇ ವಿಶೇಷ ಕಾಳಜಿ. ಕಾಂಗ್ರೆಸ್‌ ಸರ್ಕಾರದ ಈ ಇಬ್ಭಗೆ ನೀತಿಗೆ ಧಿಕ್ಕಾರ ಎಂದು ಟ್ವೀಟ್ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment