ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ನಗರದ ಖ್ಯಾತ ಉದ್ಯಮಿ ಕೆ.ಎಸ್. ಪ್ರಸನ್ನ ಕುಮಾರ್ ರೆಡ್ಡಿ ಅವರಿಗೆ ರೆಡ್ಡಿ ಸಮಾಜದ ಮುಖಂಡರು ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿದರು.
ಜನವರಿ 19 ರಂದು ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಮಹಾಯೋಗಿ ವೇಮನ ಜಯಂತಿ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ರೆಡ್ಡಿ ಸಮುದಾಯದ ಪರವಾಗಿ ಅಗತ್ಯ ಸಹಕಾರ ನೀಡಿದ್ದರು. ಮುಖ್ಯವಾಗಿ ಅತಿಥಿಗಳಿಗೆ ಮತ್ತು ಸಮಾಜ ಬಾಂಧವರಿಗೆ ಊಟದ ವ್ಯವಸ್ಥೆ ಸೇರಿ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜದ ಮುಖಂಡರು ಮಂಗಳವಾರ ಅವರನ್ನು ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಭೀಮಾರೆಡ್ಡಿ, ವೆಂಕಟ ಶಿವಾ ರೆಡ್ಡಿ, ವಿಜಯಕುಮಾರ್, ಅಶ್ವಥ್ ರೆಡ್ಡಿ, ಮಂಜುನಾಥ ರೆಡ್ಡಿ, ತಿಪ್ಪಾರೆಡ್ಡಿ ಕಟ್ಟಾ,ಕೃಷ್ಣ ರೆಡ್ಡಿ ಭವನಂ, ಧನುಂಜಯ ರೆಡ್ಡಿ, ವೆಂಕಟೇಶ ರೆಡ್ಡಿ, ಕೋದಂಡರಾಮ ರೆಡ್ಡಿ, ವಿಶಾಲ್, ನಾಗಭೂಷಣ್ ರೆಡ್ಡಿ ಸೇರಿದಂತೆ ಸಮಾಜದ ಅನೇಕರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











