Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಂತ್ರಾಲಯದ ವಿದ್ಯಾಪೀಠದ ವಾಹನ ಅಪಘಾತ : ಚಾಲಕ, ವಿದ್ಯಾರ್ಥಿಗಳು ಸಾವು..!

---Advertisement---

ರಾಯಚೂರು: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಅಪಘಾತಕ್ಕೀಡಾಗಿ ಚಾಲಕ, ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕ್ರೂಶರ್ ವಾಹನದ ಚಾಲಕನಾಗಿದ್ದ 20 ವರ್ಷದ ಶಿವು ಹಾಗೂ ವಿದ್ಯಾರ್ಥಿಗಳಾದ 18 ವರ್ಷದ ಹಯವದನ, 22 ವರ್ಷದ ಸುಜಯೇಂದ್ರ, 20 ವರ್ಷದ ಅಭಿಲಾಶ್ ಸಾವನ್ನಪ್ಪಿದ್ದಾರೆ.

ಸಿಂಧನೂರು ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕ್ರೂಶರ್ ವಾಹನದಲ್ಲಿ ಸುಮಾರು 14 ಜನ ಪ್ರಯಾಣ ಮಾಡ್ತಾ ಇದ್ದರು. ಮಂತ್ರಾಲಯದಿಂದ ಹೊರಟು ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿದ್ದರು. ಕ್ರೂಶರ್ ಬಹಳ ವೇಗದಲ್ಲಿ ಚಲಿಸುತ್ತಿತ್ತು. ಆದ ಕಾರಣ ಸಿಂಧನೂರು ಹೊರವಲಯದಲ್ಲಿ ಆಕ್ಸಲ್ ಕಟ್ ಆಗಿ ಭೀಕರ ಅಪಘಾತವಾಗಿದೆ. ಕ್ರೂಶರ್ ಮೂರು ಬಾರಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಚಾಲಕ, ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಬಲಿಯಾಗಿದ್ದಾರೆ. ಇನ್ನುಳಿದ ಹತ್ತು ಮಂದಿಗೆ ಗಾಯವಾಗಿದೆ. ತಕ್ಷಣ ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯ ಹಾಗೂ ಅತಿಯಾದ ವೇಗವೇ ಕಾರಣ ಎಂದು ತಿಳಿದು ಬಂದಿದೆ.

ಇನ್ನು ಘಟನೆ ತಿಳಿದ ಕೂಡಲೇ ಮಂತ್ರಾಲಯ ಸ್ವಾಮಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ಒಳ್ಳೆಯ ಚಿಕಿತ್ಸೆ ಕೊಡಿಸಲು ಸೂಚಿಸಿದ್ದಾರೆ. ಆದಷ್ಟು ಬೇಗ ಗಾಯಾಳುಗಳು ಚೇತರಿಸಿಕೊಳ್ಳಲಿ ಎಂದು ಸ್ವಾಮಿಗಳು ಹಾರೈಸಿದ್ದಾರೆ. ಈ ಸಂಬಂಧ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ವಿದ್ಯಾರ್ಥಿಗಳು ಕೂಡ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು ಸಹ ವಿದ್ಯಾರ್ಥಿಗಳ ಗೋಳು ನೋಡುವುದಕ್ಕೆ ಆಗುತ್ತಿಲ್ಲ. ನಾಲ್ಕು ಜನ ಈಗಿನ್ನು ಭವಿಷ್ಯ ಕಟ್ಟಿಕೊಳ್ಳುವ ವಯಸ್ಸು. ಆದರೆ ವಿಧಿ ಇಷ್ಟಕ್ಕೆ ಆಯಸ್ಸು ಮುಗಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment