Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಟಿ. ಬಾಬುರೆಡ್ಡಿ ಅವಿರೋಧ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 27 : ತಾಲ್ಲೂಕಿನ ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.

ಟಿ. ಬಾಬುರೆಡ್ಡಿ ಸೋಮವಾರ ಅವಿರೋಧವಾಗಿ

ಚುನಾವಣಾಧಿಕಾರಿ ಸಂಜಯ್‌ ರಾಮ್. ಎಸ್. ನೇತೃತ್ವದಲ್ಲಿ ಕಸಬಾ ಕಡಬನಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಗಾದಿಯ ಚುನಾವಣೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸದಸ್ಯರು ಆಯ್ಕೆ ಮಾಡಿದರು.

ಕಡಬನಕಟ್ಟೆ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಸದಸ್ಯರುಗಳು ವಿವರ ಈ ಕೆಳಗಿನಂತಿದೆ.

1) ಶ್ರೀ ಜಿ ಟಿ ಬಾಬುರೆಡ್ಡಿ, ಅಧ್ಯಕ್ಷರು

2) ಶ್ರೀ ಕೆ ಟಿ ರುದ್ರಮುನಿ, ಉಪಾಧ್ಯಕ್ಷರು

3) ಶ್ರೀ ಬಿ ಎಲ್ ಗೋಪಾಲ, ಸದಸ್ಯರು

4) ಶ್ರೀ ಜಿ ಎಸ್ ಜಗದೀಶ್, ಸದಸ್ಯರು

5) ಶ್ರೀ ಎಸ್ ಆರ್ ರಘು, ಸದಸ್ಯರು

6) ಶ್ರೀ ಕೆ ಲೋಕೇಶ್, ಸದಸ್ಯರು

7) ಶ್ರೀ ಟಿ ಹನುಮಯ್ಯ, ಸದಸ್ಯರು

8) ಶ್ರೀ ಮಹಂತೇಶ್, ಸದಸ್ಯರು

9) ಶ್ರೀ ಎಂ ಟಿ ಮಂಜುನಾಥ, ಸದಸ್ಯರು

10) ಶ್ರೀಮತಿ ಪಾಪಮ್ಮ, ಸದಸ್ಯರು

11) ಶ್ರೀಮತಿ ಅನುಸೂಯಮ್ಮ, ಸದಸ್ಯರು

12) ಶ್ರೀಮತಿ ಓಬಕ್ಕ, ಸದಸ್ಯರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಸಂಜಯ್ ರಾಮ್ ತಿಳಿಸಿದ್ದಾರೆ.

ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಸಂಘದ ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿ ಸನ್ಮಾನಿಸಿ, ಅಭಿನಂದಿಸಿದರು. ನೂತನ ಅಧ್ಯಕ್ಷ
ಜಿ ಟಿ ಬಾಬುರೆಡ್ಡಿ, ಮಾತನಾಡಿ, ಸಂಘದ ಎಲ್ಲ ನಿರ್ದೇಶಕರ ಸಹಕಾರದಿಂದ ನಾನೀಗ ಸಂಘದ ಅಧ್ಯಕ್ಷನಾಗಿದ್ದೇನೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆಂದು ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment