ಗುಬ್ಬಿ: ವೈದ್ಯಕೀಯ ಸೇವೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ರಕ್ತದ ವ್ಯವಸ್ಥೆ ಮಾಡಿದ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಅಧ್ಯಕ್ಷರಾದ ಗುಬ್ಬಿಯ ಡಾ.ಆದರ್ಶ್ ಅವರಿಗೆ ಗಣರಾಜ್ಯೋತ್ಸವ ದಿನದಂದು ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿ ಪ್ರದಾನ ಮಾಡಲಾಯಿತು.
ಧಾರವಾಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತ ರಕ್ಷಣಾ ಸಮಿತಿ ಪ್ರತಿವರ್ಷ ವಿವಿಧ ಸೇವಾ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಒಂದು ವರ್ಷದಲ್ಲಿ ಮೂರು ಸಾವಿರ ಕುಟುಂಬಕ್ಕೆ ರಕ್ತವ್ಯವಸ್ಥೆ ಸೇವೆ ಮಾಡಿದ್ದನ್ನು ಗುರುತಿಸಿ ನಮ್ಮ ಫೌಂಡೇಶನ್ ಗೆ ನೀಡಿರುವುದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪಡೆದ ಡಾ.ಆದರ್ಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










