ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜನವರಿ. 29 :
ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಐಸಿಎಸ್ಸಿ ವಿಭಾಗದ 9ನೇ ತರಗತಿಯ ಟಿ.ಜಾಗೃತ್ ಮತ್ತು ಹರ್ಷವರ್ಧನ್.ಎಸ್ ಇವರು ಜನವರಿ 21 ರಿಂದ 25 ರವರೆಗೂ ಶಾಲಾ ಶಿಕ್ಷಣ ಇಲಾಖೆ ನಿರ್ದೇಶನಾಲಯದ ವತಿಯಿಂದ ಪಾಂಡಿಚೇರಿಯಲ್ಲಿ ನಡೆದ “ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನ – 2025” (S.I.S. F-2025) ದಲ್ಲಿ “ಬಹುಪಯೋಗಿ ಆಧುನಿಕ ಎತ್ತಿನ ಗಾಡಿ” [Versatile and Modern Bullock cart]] ಎಂಬ ಶೀರ್ಷಿಕೆಯ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ, ಮಾದರಿಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ನಮಗಾಗುವ ಅನುಕೂಲಗಳು ಹಾಗೂ ಹಣದ ಮಿತವ್ಯಯದ ಬಗ್ಗೆ, ನಮಗೆ ದೊರೆಯುವ ಸಂಪನ್ಮೂಲಗಳನ್ನು ಸುಲಭವಾಗಿ ಹೇಗೆ ನಾವು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಇವರು ನೀಡಿದ ವಿವರಣೆ ಮತ್ತು ಅತ್ಯಾಕರ್ಷಕ ಮಾದರಿಯು ಎಲ್ಲರ ಮೆಚ್ಚುಗೆ ಗಳಿಸಿ, “ರಾಷ್ಟ್ರ ಮಟ್ಟದಲ್ಲಿ ಮೂರನೇ ಬಹುಮಾನ” ಪಡೆದಿದೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದ ರಾಜ್ಯಗಳ ವಿಭಾಗದಲ್ಲಿ “ಐದನೇ ಅತ್ಯುತ್ತಮ ವಿಜ್ಞಾನ ಮಾದರಿಯಾಗಿ” ಆಯ್ಕೆಯಾಗಿ, ಚಿತ್ರದುರ್ಗ ಜಿಲ್ಲೆಗಷ್ಟೇ ಅಲ್ಲದೆ ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಈ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳಾದ ಜಾಗೃತ್.ಟಿ ಮತ್ತು ಹರ್ಷವರ್ದನ್.ಎಸ್ ಹಾಗೂ ಮಾರ್ಗದರ್ಶಿ ಶಿಕ್ಷಕಿಯಾದ ಆಶಾ.ಸಿ.ಹೆಚ್.ಎಮ್. ಅವರುಗಳಿಗೆ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕರಾದ, ಶ್ರೀ.ಎಸ್.ಎಂ ಪೃಥ್ವೀಶ ಹಾಗೂ ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ, ಐಸಿಎಸ್ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ, ಐಸಿಎಸ್ಇ ಉಪಪ್ರಾಚಾರ್ಯರಾದ ಅವಿನಾಶ್ ಬಿ, ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್