Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆದಾಯ ತೆರಿಗೆ ಮಿತಿ ಹೆಚ್ಚಳ : ಕೇಂದ್ರ ಬಜೆಟ್ ಹೈಲೇಟ್ಸ್ ಇಲ್ಲಿದೆ

---Advertisement---

 

ಕೇಂದ್ರ ಬಜೆಟ್ ನಲ್ಲಿ 12 ಲಕ್ಷದ ಆದಾಯದವರೆಗೂ ತೆರಿಗೆ ವಿನಾಯಿತಿಯನ್ನು ಹೆಚ್ಚಳ ಮಾಡಲಾಗಿದೆ. ಇದರಿಂದ ತಿಂಗಳಿಗೆ 1 ಲಕ್ಷ ರೂಪಾಯಿ ದುಡಿಯುವವರಿಗೂ ತೆರಿಗೆ ಪಾವತಿ ಮಾಡಬೇಕಾಗಿಲ್ಲ. ಬಜೆಟ್ ಮಂಡನೆ ವೇಳೆ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ. ಈ ಮಸೂದೆಯು ನೇರ ತೆರಿಗೆ ಕೋಡ್ ಅನ್ನು ಆಧರಿಸಿದೆ ಎಂದು ನಿರೀಕ್ಷಿಸಲಾಗಿದೆ. ಇದು ಅಸ್ತಿತ್ವದಲ್ಲಿರುವ 1961ರ ಆದಾಯ ತೆರಿಗೆ ಕಾಯಿದೆಯಲ್ಲಿ ಬದಲಾವಣೆ ಆಗಲಿದೆ.

* ಕ್ಯಾನ್ಸರ್ ಹಾಗೂ ಇನ್ನಿತರ ಮಾರಣಾಂತಿಕ ಅಪರೂಪದ ಕಾಯಿಲೆಗಳಿಂದ ರಕ್ಷಿಸಬಲ್ಲ 36 ಜೀವ ರಕ್ಷಕ ಔಷಧಿಗಳನ್ನು ತೆರಿಗೆ ಮುಕ್ತ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ.

* ಬೀದಿ ಬದಿ ವ್ಯಾಪಾರಿಗಳು ಮತ್ತು ಆನ್ಲೈನ್ ಹಾಗೂ ನಗರ ಕೆಲಸಗಾರರಿಗೆ, ಗುರುತಿನ ಕಾರ್ಡ್ ಗಳು ಮತ್ತು ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಣಿಯನ್ನು ಒದಗಿಸಲಾಗುವುದು. ನಗರ ಕಾರ್ಮಿಕರ ಸಾಮಾಜಿಕ – ಆರ್ಥಿಕ ಉನ್ನತಿಗಾಗಿ ಯೋಜನೆ ಜಾರಿ, ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಬ್ಯಾಂಕ್ ಗಳಿಂದ ವರ್ಧಿತ ಸಾಲಗಳೊಂದಿಗೆ ನವೀಕರಿಸಲಾಗುವುದು. ಯುಪಿಐ ಲಿಂಕ್ ಮಾಡಿದ ಕ್ರೆಡಿಟ್ ಕಾರ್ಡ್ ಗಳು 30 ಸಾವಿರ ರೂಪಾಯಿ ಮಿತಿ ಮತ್ತು ಸಾಮಾರ್ಥ್ಯ ನಿರ್ಮಾಣ ಬೆಂಬಲ ನೀಡುವ ಘೋಷಣೆ ಮಾಡಲಾಗುವುದು.

* ಗ್ರಾಮೀಣ ಭಾಗದಲ್ಲಿ 1.5 ಲಕ್ಷ ಪೋಸ್ಟ್ ಆಫೀಸ್ ಗಳನ್ನು ಹೆಚ್ಚಳ ಮಾಡುವ ಗುರಿ ಹೊಂದಲಾಗಿದೆ.

* ದೇಶದ ಪ್ರಮುಖ 50 ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

* ಆರೋಗ್ಯ ಅಭಿವೃದ್ಧಿ ಉದ್ದೇಶದಿಂದ ಒಂದು ಕೋಟಿ ಹಾಲುಣಿಸುವ ತಾಯಂದಿರಿಗೆ ನ್ಯೂಟ್ರಿಷನ್ ಭರಿತ ಆಹಾರ ನೀಡುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment