Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐನಿಂದ ಬಹುಮಾನ

---Advertisement---

ಸುದ್ದಿಒನ್ : ಪ್ರತಿಷ್ಠಿತ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತ ತಂಡ ಎರಡನೇ ಬಾರಿಗೆ ಗೆದ್ದುಕೊಂಡಿದೆ. ಕೌಲಾಲಂಪುರದ ಬಯೋಮಾಸ್ ಓವಲ್‌ನಲ್ಲಿ ನಡೆದ U-19 ಮಹಿಳೆಯರ T20 ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಭಾರತ 2 ನೇ ಬಾರಿ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಇದರಿಂದಾಗಿ ಭಾರತೀಯ ಮಹಿಳಾ ಆಟಗಾರರಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಸಹಾ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ರೂ. 5 ಕೋಟಿ ಬಹುಮಾನ ಘೋಷಿಸಿದೆ.

ಈ ಬಹುಮಾನವನ್ನು ಆಟಗಾರರು ಮತ್ತು ಸಿಬ್ಬಂದಿ ಹಂಚಿಕೊಳ್ಳುತ್ತಾರೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾದ 19 ವರ್ಷದೊಳಗಿನವರ ಮಹಿಳಾ ತಂಡ 20 ಓವರ್ ಗಳಲ್ಲಿ 82 ರನ್ ಗಳಿಸಿ ಆಲೌಟ್ ಆಯಿತು. ಟೀಂ ಇಂಡಿಯಾ ಪರ ಗೊಂಗಡಿ ತ್ರಿಶಾ 3 ವಿಕೆಟ್ ಪಡೆದು ಮಿಂಚಿದರು. ಹಾಗೆಯೇ ಪರುಣಿಕಾ ಸಿಸೋಡಿಯಾ, ಆಯುಷಿ ಶುಕ್ಲಾ ಮತ್ತು ವೈಷ್ಣವಿ ಶರ್ಮಾ ತಲಾ 2 ವಿಕೆಟ್ ಪಡೆದರು. 83 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಪರ ಗೊಂಗಡಿ ತ್ರಿಶಾ 33 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರೆ, ಸಾನಿಕಾ ಚಲ್ಕೆ ಅಜೇಯ 26 ರನ್ ಗಳಿಸಿದರು. ಇದರೊಂದಿಗೆ ಭಾರತ ತಂಡ 11.2 ಓವರ್ ಗಳಲ್ಲಿ 84 ರನ್ ಗಳಿಸಿ 9 ವಿಕೆಟ್ ಗಳ ಜಯ ಸಾಧಿಸಿತು.

ಐಸಿಸಿ ಈವೆಂಟ್‌ನಲ್ಲಿ ಪ್ರತಿ ವಿಜೇತ ತಂಡಕ್ಕೆ ಐಸಿಸಿ ಹಣದ ಬಹುಮಾನವನ್ನು ನೀಡುತ್ತದೆ. ಆದರೆ, ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಐಸಿಸಿಯಿಂದ ಯಾವುದೇ ಬಹುಮಾನ ಸಿಗುವುದಿಲ್ಲ. ಐಸಿಸಿ ಪ್ರೋಟೋಕಾಲ್ ಪ್ರಕಾರ, ಅಂಡರ್-19 ಮಟ್ಟದಲ್ಲಿ ವಿಶ್ವಕಪ್ ವಿಜೇತರು ಯಾವುದೇ ಬಹುಮಾನದ ಹಣವನ್ನು ನೀಡುವುದಿಲ್ಲ. ಹಲವು ವರ್ಷಗಳಿಂದ ನಡೆಯುತ್ತಿರುವ U-19 ಪುರುಷರ ವಿಶ್ವಕಪ್‌ನಲ್ಲೂ ವಿಜೇತ ತಂಡಕ್ಕೆ ಯಾವುದೇ ಹಣಕಾಸಿನ ಬಹುಮಾನ ನೀಡಲಾಗಿಲ್ಲ. ಐಸಿಸಿ ಅಧ್ಯಕ್ಷ ಜೈಶಾ ಅವರು ವಿಶ್ವ ಚಾಂಪಿಯನ್ ಆದ ಭಾರತ ಮಹಿಳಾ ತಂಡಕ್ಕೆ ಪದಕ ಮತ್ತು ಟ್ರೋಫಿಗಳನ್ನು ಪ್ರದಾನ ಮಾಡಿದರು. ಎಲ್ಲರಿಗೂ ಪದಕಗಳನ್ನು ನೀಡಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment