Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

---Advertisement---

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ ಬೆಂಗಳೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದಾರೆ. ಫೆಬ್ರವರಿ 16ರಂದು ಮೈಸೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಆದರೆ ಇದರ ನಡುವೆ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್ ಆಗುತ್ತಿದ್ದಾರೆ.

ಡಾಲಿ ಹಾಗೂ ಧನ್ಯತಾ ಇತ್ತೀಚೆಗೆ ಒಂದು ಪ್ರೆಸ್ ಮೀಟ್ ಮಾಡಿ, ತಮ್ಮ ಲವ್ ಸ್ಟೋರಿ, ಮದುವೆ ಬಗ್ಗೆ ಪ್ರಿಪರೇಷನ್ ಎಲ್ಲದರ ಬಗ್ಗೆ ಮಾಹಿತಿ ನೀಡಿದ್ದರು. ಈಗಾಗಲೇ ಕನ್ನಡ ಇಂಡಸ್ಟ್ರಿಯಲ್ಲಿ ಎಲ್ಲಾ ಸ್ಟಾರ್ ಗಳಿಗೂ ಲಗ್ನ ಪತ್ರಿಕೆ ನೀಡಿದ್ದಾರೆ. ಯಶ್ ಅವರಿಗೂ ನೀಡಿದ್ದಾರೆ. ಆದರೆ ದರ್ಶನ್ ಅವರಿಗೆ ಮಾತ್ರ ನೀಡಿಲ್ಲ. ಈ ಸಂಬಂಧ ಪ್ರಶ್ನೆ ಎದುರಾಗಿತ್ತು. ದರ್ಶನ್ ಅವರನ್ನ ಯಾಕೆ ಮದುವೆಗೆ ಕರೆದಿಲ್ಲ ಎಂದು. ಆಗ ಡಾಲಿ, ‘ಎಲ್ಲರನ್ನು ಮದುವೆಗೆ ಕರೆದಿದ್ದೀವಿ ಎಂದ ಮೇಲೆ ಅವರನ್ನು ಕರೆಯುವ ಪ್ರಯತ್ನ ಮಾಡಿರುತ್ತೇನೆ. ಆದ್ರೆ ಅವರನ್ನು ರೀಚ್ ಮಾಡುವುದಕ್ಕೆ ಸಾಧ್ಯವಾಗಿಲ್ಲ. ತುಂಬಾನೇ ಪ್ರೀತಿಯಿಂದ ಅವರನ್ನು ಇಲ್ಲಿಂದಲೇ ಕರೆಯುತ್ತೇನೆ’ ಎಂದಿದ್ದಾರೆ.

ಈ ಹೇಳಿಕೆ ಇದೀಗ ಸಿಕ್ಕಾ ಪಟ್ಟೆ ಟ್ರೋಲ್ ಆಗುತ್ತಿದೆ. ಡಾಲಿಗೆ ನಿಜಕ್ಕೂ ದರ್ಶನ್ ಅವರನ್ನ ಸಂಪರ್ಕ ಮಾಡೋದಕ್ಕೆ ಅಷ್ಟು ಕಷ್ಟನಾ..? ಸುಖಾ ಸುಮ್ಮನೆ ಹೀಗೆಲ್ಲಾ ಹೇಳಬಾರದು. ಅಣ್ಣ ಅಣ್ಣ ಎನ್ನುತ್ತಿದ್ದವರು ಅಣ್ಣನನ್ನು ಮದುವೆಗೆ ಕರೆಯೋದಕ್ಕೆ ಆಗುವುದಿಲ್ಲವೇ..? ಬೆಳೆಯುವವರೆಗೂ ಅಣ್ಣ ಅಣ್ಣ ಎನ್ನುತ್ತಿದ್ದವರು ಈಗ ಹೀಗೆ ಮಾತನಾಡೋದಾ..? ಎಂದಿದ್ದಾರೆ. ಇದಕ್ಕೆ ಡಾಲಿ ಧನಂಜಯ ಫ್ಯಾನ್ಸ್ ಕೂಡ ಕಮೆಂಟ್ ಹಾಕಿದ್ದು, ಡಾಲಿ ತಮ್ಮ ಪರಿಶ್ರಮದಿಂದಲೇ ಬೆಳೆದು ಬಂದದ್ದು. ಅವರನ್ನ ಯಾರೂ ಬೆಳೆಸಿಲ್ಲ. ಅವರು ಮದುವೆಗೆ ಆಹ್ವಾನಿಸಲ್ಲ ಅಂತ ಹೇಳಿಲ್ಲ. ಸಂಪರ್ಕಿಸಲು ಸಾಧ್ಯವಾಗಿಲ್ಲ ಅಂತಷ್ಟೇ ಹೇಳಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment