Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಹೇಳಿದರು.

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದರ ಜೊತೆಗೆ ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ ಅವರು, ದ್ವಿತೀಯ ಪಿಯು ಪೂರೈಸಿದ ಮಕ್ಕಳು ನೀಟ್, ಸಿಇಟಿ ಪರೀಕ್ಷೆಗಾಗಿ ಕೋಚಿಂಗ್ ತರಗತಿಗಳಿಗೆ ಹೋಗಬೇಕಾಗುತ್ತದೆ. ಕೋಚಿಂಗ್‍ಗಾಗಿ ಸುಮಾರು 4 ರಿಂದ 5 ಲಕ್ಷದವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ ಆರ್ಥಿಕ ವ್ಯವಸ್ಥೆ ನೋಡಿಕೊಂಡು, ಉಳಿದ ಶಾಲೆಗಳಿಗೂ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment