Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಲಿತ ಸಿಎಂ ಚರ್ಚೆ ಬೆನ್ನಲ್ಲೇ ಖರ್ಗೆ ಭೇಟಿಯಾದ ಉದ್ದೇಶ ತಿಳಿಸಿದ ಸಚಿವ ಪರಮೇಶ್ವರ್..!

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನೂರೆಂಟು ಗೊಂದಲ, ನೂರೆಂಟು ಚರ್ಚೆಗಳು. ಅದರಲ್ಲಿ ಬಹಳ ಮುಖ್ಯವಾಗಿ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ. ದಲಿತ ಸಿಎಂ ವಿಚಾರ ಆಗಾಗ ಚರ್ಚೆಗೆ ಬಂದು ತಣ್ಣಗಾಗುವುದು ಸಾಮಾನ್ಯ ಬಿಡು. ಆದರೆ ಈ ಬಾರಿ ಕಾಂಗ್ರೆಸ್ ನಲ್ಲಿ ದಲಿತರ ಡಿನ್ನರ್ ಮೀಟಿಂಗ್ ಕೂಡ ಚರ್ಚೆಗೆ ಬಂದಿತ್ತು. ಅದನ್ನ ಹೈಕಮಾಂಡ್ ಸೂಚನೆ ಮೇರೆಗೆ ರದ್ದು ಮಾಡಲಾಗಿತ್ತು. ಈ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಇದು ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅದಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಉತ್ತರ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಹಾಗೂ ನಮ್ಮ ಕುಟುಂಬ ಒಂದೇ. ರಾಜಕೀಯವನ್ನು ಹೊರತುಪಡಿಸಿದರೆ ಅವರು ನನಗೆ ಹಿರಿಯ ಅಣ್ಣನಿದ್ದಂತೆ. ನಾನು ಆಗಾಗ್ಗೆ ಅವರನ್ಬು ಭೇಟಿ ಮಾಡುತ್ತಾ ಇರುತ್ತೇನೆ. ಭೇಟಿ ವೇಳೆ ಕುಟುಂಬ ವಿಚಾರಗಳನ್ನು ಮಾತನಾಡುತ್ತೇವೆ. ಭೇಟಿಯಾದಾಗೆಲ್ಲ ರಾಜಕೀಯದ ವಿಚಾರಗಳನ್ನೇ ಮಾತನಾಡುವುದಕ್ಕೆ ಹೋಗುವುದಿಲ್ಲ. ನಿನ್ನೆ ಕೂಡ ಯಾವುದೇ ರೀತಿಯ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ. ಬದಲಿಗೆ ಕುಟುಂಬದ ವಿಚಾರಗಳನ್ನೇ ಮಾತನಾಡಿದ್ದೇನೆ.

ಒಂದೇ ಒಂದು ಪದವೂ ರಾಜಕೀಯದ ಬಗ್ಗೆ ಇರಲಿಲ್ಲ. ಅದಕ್ಕೆ ವಿಶೇಷವಾದ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ದೆಹಲಿಗೆ ಹೋಗುತ್ತೇನೆ. ನಮ್ಮ ನಾಯಕರನ್ನು ಆಗಾಗ ಭೇಟಿಯಾಗಿ ಬರುತ್ತೇನೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವೇನಿದೆ. ಒಂದು ವೇಳೆ ಚರ್ಚೆ ಮಾಡಿದ್ದರೆ ಏನು ಮಾಡಿದ್ದೇನೆ ಎಂಬುದರ ಬಗ್ಗೆ ನಿಮ್ಮ ಮುಂದೆ ಹೇಳುತ್ತಿದ್ದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...