Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಆಸ್ಪತ್ರೆ ವೈದ್ಯರ ಹಾದಿರಂಪ- ಬೀದಿರಂಪ : ವೀಡಿಯೋ ವೈರಲ್

---Advertisement---

ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ.‌ ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ ಹರಿಸಿ, ಚಿಕಿತ್ಸೆ ನೀಡುವುದನ್ನು ಬಿಟ್ಟು, ತಮ್ಮದೇ ಸಮಸ್ಯೆಗಳಿಗೆ ರೋಗಿಗಳಿಗೆ ನರಕ ತೋರಿಸುತ್ತಿದ್ದಾರೆ. ವೈದ್ಯರಿಬ್ಬರು ಹಾದಿ ರಂಪ ಬೀದಿ ರಂಪ ಮಾಡಿಕೊಂಡು ಕೂತಿದ್ದಾರೆ. ಈ ಘಟನೆ ನಡೆದಿರೋದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಾಪುರ ಹೋಬಳಿಯ ಸರ್ಜಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ. ಇದು ಸಚಿವ ಡಾ.ಸುಧಾಕರ್ ಅವರ ಕ್ಷೇತ್ರವೂ ಹೌದು.

ಸದ್ಯ ರೋಗಿಗಳ ಕಡೆ ಗಮನ ಕೊಡದೆ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವವರು ಡಾ.ಚಂದ್ರಮೌಳಿ ಹಾಗೂ ಡಾ.ಹನುಮಂತರಾಯಪ್ಪ. ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಸಹ ಇದಾವೆ. ಡಾ.ಹನುಮಂತರಾಯಪ್ಪ ರೋಗಿಗಳ ಮೇಲೆ ಹಲ್ಲೆ ಮಾಡಿ ಹುಚ್ಚಾಟ ಮೆರೆದರೆ ಅತ್ತ ಡಾ.ಚಂದ್ರಮೌಳಿ ಕುಡಿದು ಬಂದು ಡ್ಯೂಟಿ ಮಾಡುತ್ತಿದ್ದಾರೆ. ರೋಗಿಗಳು ಇವರಿಬ್ಬರ ವರ್ತನೆಯಿಂದ ಬೇಸತ್ತು ಹೋಗಿದ್ದಾರೆ.

ಡಾ.ಚಂದ್ರಮೌಳಿಯ ಕುಡಿತದ ಅವತಾರವನ್ನು ಸಾರ್ವಜನಿಕರು ವಿಡಿಯೋ ಮಾಡಿ, ಮೇಲಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗಳು ಚಿಕಿತ್ಸೆಗೆಂದು ರಾತ್ರಿ ಸಮಯದಲ್ಲಿ ಆಸ್ಪತ್ರೆಗೆ ಹೋದರೆ ಕುಡಿದೇ ಟ್ರೀಟ್ಮೆಂಟ್ ನೀಡುತ್ತಾರೆ ಎಂಬ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ಇದರಿಂದ ಸಂಬಂಧಪಟ್ಟವರು ಮೊದಲು ಅಮಾನತು ಮಾಡಿ. ಆ ಇಬ್ಬರು ವೈದ್ಯರು ಆಸ್ಪತ್ರೆಯಲ್ಲಿರಬಾರದೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಯಾವುದೇ ಸಣ್ಣ ಪುಟ್ಟ ಕಾಯಿಲೆಯಾಗಲಿ, ದೊಡ್ಡ ದೊಡ್ಡ ಕಾಯಿಲೆಯಾಗಲೀ ವೈದ್ಯರು ಬದುಕಿಸುತ್ತಾರೆಂಭ ನಂಬಿಕೆಯಿಂದ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಹೀಗೆ ಕುಡಿದು ಚಿಕಿತ್ಸೆ ನೀಡಿದರೆ ಜನ ತಮ್ಮ ಜೀವದ ಬಗ್ಗೆ ಆತಂಕಗೊಳ್ಳುವುದಿಲ್ಲವಾ..?

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment