Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಕ್ರೋ ಫೈನಾನ್ಸ್ ಹಾವಳಿ: ಕೊನೆಗೂ ಸಿಕ್ತು ರಾಜ್ಯಪಾಲರ ಅನುಮೋದನೆ

---Advertisement---

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿಮೀರಿದೆ. ಗ್ರಾಮೀಣ ಭಾಗದ ಜನರನ್ನೇ ಟಾರ್ಗೆಟ್ ಮಾಡುವ ಫೈನಾನ್ಸ್ ಕಂಪನಿಗಳು ಸಾಲ ಸೌಲಭ್ಯವನ್ನು ಸುಲಭವಾಗಿ ಕೊಟ್ಟು ಬಿಡುತ್ತಾರೆ. ಕಟ್ಟುವುದಕ್ಕೆ ತಡವಾದರೆ ಮನೆ ಮುಂದೆ ಹೋಗಿ ಗಲಾಟೆ ಮಾಡುವುದು, ಮರ್ಯದೆ ತೆಗೆಯುವ ರೀತಿ ನಡೆದುಕೊಳ್ಳುವುದು ಹಾಗೇ ಮನೆಗೆ ಬೀಗವನ್ನೆ ಜಡಿದು ಬರುವ ಕೆಲಸವನ್ನು ಮಾಡುತ್ತಿದ್ದಾರೆ. ಇದರಿಂದ ಅದೆಷ್ಟೋ ಜನ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಫೈನಾನ್ಸ್ ಉಪಟಳ ಜಾಸ್ತಿಯಾದಾಗ ಸರ್ಕಾರ ಇದಕ್ಕೆ ಕಾನೂನಿನ ಮೂಲಕ ಕಂಟ್ರೋಲ್ ಗೆ ತರುವುದಕ್ಕೆ ತೀರ್ಮಾನಿಸಿತ್ತು.

ಅಧಿಕಾರಿಗಳ ಜೊತೆಗೆ ಕೂತು ಚರ್ಚೆ ಮಾಡಿ, ಫೈನಾನ್ಸ್ ಕಂಪನಿಗಳ ಉಪಟಳ ತಪ್ಪಿಸಲು ಸುಗ್ರಿವಾಜ್ಞೆ ಹೊರಡಿಸಲು ನಿರ್ಧರಿಸಿದ ಸರ್ಕಾರ, ಅನುಮೋದನೆಯನ್ನು ರಾಜ್ಯಪಾಲರಿಗೆ ನೀಡಿತ್ತು. ಆದರೆ ಸುಗ್ರಿವಾಜ್ಞೆಯಲ್ಲಿ ಒಂದಷ್ಟು ಬದಲಾವಣೆಗಳು ಆಗಬೇಕೆಂದ ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದರು. ಇದೀಗ ಸುಗ್ರಿವಾಜ್ಞೆಗೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.

ಕಡೆಗೂ ರಾಜ್ಯಪಾಲರು ಸುಗ್ರಿವಾಜ್ಞೆಗೆ ಒಪ್ಪಿಗೆ ಸೂಚಿಸಿದ್ದಾರೆ. ಅನುಮೋದನೆಗೆ ಸಹಿ ಹಾಕಿದ್ದಾರೆ. ಸುಗ್ರಿವಾಜ್ಞೆ ಮೂಲಕ ಇನ್ಮುಂದೆ ಸರ್ಕಾರವೂ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲಿದೆ. ಸುಲಭವಾಗಿ ಹಣ ಕೊಟ್ಟು, ಜನರ ಪ್ರಾಣ ತಿನ್ನುತ್ತಿದ್ದ ಕಂಪನಿಗಳಿಗೆ ಬಿಸಿ ಮುಟ್ಟಿಸಲಿದೆ. ಸರ್ಕಾರ ನಿಯಮಗಳನ್ನು ಪಾಲಿಸದೆ ಹೋದಲ್ಲಿ ಲೈಸೆನ್ಸ್ ಅನ್ನು ರದ್ದು‌ ಮಾಡುವ ಸಾಧ್ಯತೆ ಇದೆ. ಪೊಲೀಸ್ ಠಾಣೆಯಲ್ಲಿ ಕಿರುಕುಳ ಅನುಭವಿಸಿದವರು ದೂರು ದಾಖಲಿಸಬಹುದು. ಪೊಲೀಸರು ಕೂಡ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳುವುದಕ್ಜೆ ಅವಕಾಶ ಇರುವ ಬಗ್ಗೆ ಸುಗ್ರಿವಾಜ್ಞೆಯಲ್ಲಿದೆ. ಇನ್ನಾದರೂ ಮೈಕ್ರೋ ಫೈನಾನ್ಸ್ ಕಿರುಕುಳ ಹತೋಟಿಗೆ ಬರುತ್ತಾ ಎಂಬುದನ್ನು ನೋಡಬೇಕಿದೆ.p

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment