Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ತೊಗರಿ, ಕಡಲೇಕಾಳಿಗೆ ಬೆಂಬಲ ಬೆಲೆ : ಫೆ.17ರಿಂದ ನೋಂದಣಿ ಪ್ರಾರಂಭ

---Advertisement---

 

ಚಿತ್ರದುರ್ಗ.15: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೋಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್‍ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಪರವಾಗಿ ಜಿಲ್ಲೆಯ ಪಿಎಸಿಎಸ್, ಎಫ್‍ಪಿಒ, ಟಿಎಪಿಸಿಎಂಎಸ್‍ಗಳ ಮೂಲಕ ಖರೀದಿ ಕೇಂದ್ರಗಳನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆರಂಭಿಸಲಾಗಿದ್ದು, ಇದೇ ಫೆ.17ರಿಂದ ರೈತರಿಂದ ನೋಂದಣಿ ಪ್ರಾರಂಭವಾಗಲಿದೆ.

ರೈತರು ಆಧಾರ್ ಪ್ರತಿಯೊಂದಿಗೆ ನೋಂದಾವಣಿ ಕೇಂದ್ರಗಳಲ್ಲಿ ನೋಂದಾವಣಿ ಮಾಡಿಸಬೇಕಾಗಿರುತ್ತದೆ. ಮಾರ್ಚ್ 30 ನೋಂದಣಿಗೆ ಕೊನೆಯ ದಿನವಾಗಿದೆ.
ಪ್ರತಿ ರೈತರಿಂದ ಎಕರೆಗೆ ತೋಗರಿಯು 4 ಕ್ವಿಂಟಾಲ್‍ನಂತೆ ಗರಿಷ್ಟ ಮಿತಿಯು 40 ಕ್ವಿಂಟಾಲ್ ಪ್ರಮಾಣವಿರುತ್ತದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ರೂ.7550/- ನಿಗಧಿಪಡಿಸಿರುತ್ತದೆ.
ಪ್ರತಿ ರೈತರಿಂದ ಎಕರೆಗೆ ಕಡಲೇಕಾಳು 4 ಕ್ವಿಂಟಾಲ್‍ನಂತೆ ಗರಿಷ್ಟ ಮಿತಿಯು 20 ಕ್ವಿಂಟಾಲ್ ಪ್ರಮಾಣವಿರುತ್ತದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ರೂ.5650/- ನಿಗಧಿಪಡಿಸಿದೆ.

ಖರೀದಿ ಕೇಂದ್ರಗಳ ವಿವರ: ಚಿತ್ರದುರ್ಗ ತಾಲ್ಲೂಕಿನಲ್ಲಿ ಚಿತ್ರದುರ್ಗ ನಗರದ ಪಿಎಸಿಎಸ್, ಮಾಡನಾಯಕನಹಳ್ಳಿ, ಚಿಕ್ಕಗೊಂಡನಹಳ್ಳಿ ಪಿಎಸಿಎಸ್ ಹಾಗೂ ಶ್ರೀ ಮಂಜುನಾಥಸ್ವಾಮಿ ಎಫ್‍ಪಿಒ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ಚಿಕ್ಕಮಧುರೆ ಪಿಎಸಿಎಸ್, ಹಿರಿಯೂರು ತಾಲ್ಲೂಕಿನ ಭರಂಪುರ, ಮರಡಿಹಳ್ಳಿ, ಬಬ್ಬೂರು ಪಿಎಸಿಎಸ್, ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಪಿಎಸಿಎಸ್, ಮೊಳಕಾಲ್ಮುರಿನ ಟಿಎಪಿಸಿಎಂಎಸ್ ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ ಶ್ರೀ ರಾಮಲಿಂಗೇಶ್ವರ ಹಾರ್ಟಿಕಲ್ಚರ್ ಫಾರ್ಮರ್ಸ್‍ನಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಎಸ್.ಬಸವೇಶ್ ನಾಡಿಗರ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...