Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೊಲ್ಲ-ಕಾಡುಗೊಲ್ಲ ಅಭಿವೃದ್ದಿ ನಿಗಮ ಸಲ್ಲದು ;  ಡಾ.ಮಲ್ಲಿಕಾರ್ಜನ ಕಲಮರಹಳ್ಳಿ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ಡಿ.06) : ಈಗ ಸ್ಥಾಪನೆ ಮಾಡಿರುವ ಕಾಡುಗೊಲ್ಲ ಅಭಿವೃದ್ದಿ ನಿಗಮವನ್ನು ಯಾವುದೇ ಕಾರಣಕ್ಕೂ ಹಾಗೂ ಯಾವುದೇ ಒತ್ತಡಕ್ಕೆ ಮಣಿದು ಅದನ್ನು ಗೊಲ್ಲ-ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದು ನಾಮಕರಣ ಮಾಡಬಾರದೆಂದು ಸರ್ಕಾರವನ್ನು ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ಮಲ್ಲಿಕಾರ್ಜನ ಕಲಮರಹಳ್ಳಿ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ಶಿರಾ ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಅಭಿವೃದ್ದಿ ನಿಗವನ್ನು ಸ್ಥಾಪನೆ ಮಾಡುವುದಾಗಿ ಹೇಳಿ ನೋಟೀಫಿಕೇಷನ್ ಹೊರಡಿಸಿದರು.

ನಂತರ ಹಿರಿಯೂರು ಶಾಸಕಿ ಪೂರ್ಣಿಮ ಶ್ರೀನಿವಾಸ್ ರವರು ಒತ್ತಡಕ್ಕೆ ಮಣಿದು ಕಾಡುಗೊಲ್ಲ ಎಂಬುದನ್ನು ತೆಗೆದು ಗೊಲ್ಲ ಅಭಿವೃದ್ದಿ ನಿಗಮ ಎಂದು ಹೊಸ ಹೆಸರಿನೊಂದಿಗೆ ಅಧಿಕೃತ ಆದೇಶವನ್ನು ಹೂರಡಿಸಲಾಯಿತು. ಇದರಿಂದ ಕಾಡುಗೊಲ್ಲ ಸಮುದಾಯಕ್ಕೆ ತಣ್ನೀರು ಎರಚಿದಂತೆ ಆಯಿತು.

ನಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ಮಾಡಿದವರು ನಾವಾದರೂ ಅದರ ಉಪಯೋಗವನ್ನು ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಗೊಲ್ಲ ಸಮುದಾಯದವರು ಪಡೆಯುವಂತಾಗಿದೆ ಎಂದು ಆರೋಪಿಸಿದರು.

ಸಾರ್ವತ್ರಿಕ ಚುನಾವಣೆಗೆ ಮುನ್ನಾ ಪೂರ್ಣಿಮಾ ರವರು ಹಿರಿಯೂನಿಂದ 25 ಜನರನ್ನು ದೆಹಲಿಗೆ ಕರೆದುಕೊಂಡು ಹೋಗಿ ನಮ್ಮ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಸಮುದಾಯಕ್ಕೆ ಸೇರಿಸಬೇಕೆಂದು ಸಂಬಂಧಪಟ್ಟ ಮಂತ್ರಿಗಳಿಗೆ ಮನವಿ ಮಾಡಿಕೊಂಡು ಬಂದಿದ್ದರು. ನಂತರ ಚುನಾವಣೆ ನಡೆದು ಇವರ ಶಾಸಕರಾದ ಮೇಲೆ ಸರ್ಕಾರ ಕಾಡುಗೊಲ್ಲರ ಬಗ್ಗೆ ಮಾಡಿದ ಕುಲಶಾಸ್ತ್ರ ಅಧ್ಯಯನದ ವರದಿ ಸರಿಯಿಲ್ಲ ಮತ್ತೊಮ್ಮೆ ಮಾಡಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಇದರೊಂದಿಗೆ ಕಾಡುಗೊಲ್ಲ ಅಭಿವೃದ್ದಿ ನಿಗಮವನ್ನು ಸಹಾ ಗೊಲ್ಲ-ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದು ಪುನರ್ ರಚನೆ ಮಾಡುವಂತೆ ಸರ್ಕಾರಕ್ಕೆ ಪತ್ರ ನೀಡಿದ್ದಾರೆ. ಸರ್ಕಾರ ಇವರ ಪತ್ರಕ್ಕೆ ಮಣಿದು ಹೆಸರನ್ನು ಬದಲಾಯಿಸಿದರೆ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

ಪಾತಲಿಂಗಪ್ಪ ಮಾತನಾಡಿ, ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದ ಡಾ.ಸಿ.ಎಸ್.ದ್ವಾರಕನಾಥ್ ರವರು ಸಹಾ ನಮ್ಮ ಕಾಡುಗೊಲ್ಲರ ಬಗ್ಗೆ ಆಪಾರವಾದ ಕಾಳಜಿಯನ್ನು ಹೊಂದಿದ್ದು ಈ ಜನಾಂಗ ಎಸ್.ಸಿ.ಗಿಂತ ಕಡೆಯಾಗಿ ಬದುಕುತ್ತಿದ್ದಾರೆ. ಇವರು ಶತ ಶತಮಾನದಿಂದ ತುಳಿತಕ್ಕೆ ಒಳಗಾಗಿದ್ದಾರೆ. ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಪಂಚವಾರ್ಷಿಕ ಯೋಜನೆಯಡಿ ಪ್ರತಿ ವರ್ಷ ವಿಶೇಷವಾದ ಪ್ಯಾಕೇಜ್ ನೀಡುವಂತೆಯೂ ಸಹ ಸಲಹೆ ಮಾಡಿದ್ದಾರೆ. ಇದರೊಂದಿಗೆ ಕಾಡುಗೊಲ್ಲರಿಗಾಗಿಯೇ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸುವಂತೆಯೂ ಸಹಾ ತಿಳಿಸಿದ್ದಾರೆ ಎಂದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶೀ ರಾಜಶೇಖರಯ್ಯ, ವೆಂಕಟೇಶ್ ಗೋಷ್ಟಿಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!