ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರು ಖುರ್ಚಿ ಬಿಟ್ಟುಕೊಟ್ಟರೆ ಕೂರೋದಕ್ಕೆ ಹಲವರು ಇದ್ದಾರೆ. ಆದರೆ ಇಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಸ್ಪರ್ಧೆಯಲ್ಲಿದ್ದಾರೆ. ಹೀಗಿರುವಾಗ ಈಗ ಫೇಮಸ್ ಜ್ಯೋತಿಷಿಯವರು ಶಾಕಿಂಗ್ ಭವಿಷ್ಯವೊಂದನ್ನ ನುಡಿದಿದ್ದಾರೆ. ರಾಜ್ಯದಲ್ಲಿ ನೆಕ್ಸ್ಟ್ ಸಿಎಂ ಆಗಿ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆಂದು ಭವಿಷ್ಯ ನುಡಿದಿದ್ದಾರೆ.
ದೆಹಲಿಯ ವಿಚಾರದಲ್ಲಿ ಪ್ರಶಾಂತ್ ಕಿಣಿ ನುಡಿದ ಭವಿಷ್ಯ ನಿಜವಾಗಿದೆ. 2024 ಅಕ್ಟೋಬರ್ 13ರಂದು ದೆಹಲಿಯ ಭವಿಷ್ಯ ನುಡಿದಿದ್ದರು. ದೆಹಲಿಯ ಅಧಿಕಾರದ ಗದ್ದುಗೆಯನ್ನ ಮಹಿಳೆಯೊಬ್ಬರು ಹಿಡಿಯಲಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದೀಗ ಆ ಭವಿಷ್ಯ ನಿಜವಾಗಿದ್ದು, 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ. ರೇಖಾ ಗುಪ್ತ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಕರ್ನಾಟಕ ಭವಿಷ್ಯದ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ. ಶೀಘ್ರವೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದು, ಆ ಸ್ಥಾನವನ್ನೂ ಲಕ್ಷ್ಮೀ ಹೆಬ್ಬಾಳ್ಕರ್ ತುಂಬಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಶಾಂತ್ ಕಿಣಿ ಅವರ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ಚರ್ಚೆ ಹುಟ್ಟು ಹಾಕಿದೆ. ದೆಹಲಿಯಲ್ಲಿ ಕಿಣಿಯವರ ಭವಿಷ್ಯ ನಿಜವಾಗಿರಬಹುದು. ಆದರೆ ಕರ್ನಾಟಕದಲ್ಲಿ ಅವರೇಳಿದಂತೆ ನಡೆಯುವುದು ಬಹಳ ಕಷ್ಟವಿದೆ. ಸಿದ್ದರಾಮಯ್ಯ ಅವರೇ ಈ ಅವಧಿ ಪೂರೈಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸಿಎಂ ಹುದ್ದೆ ತೊರೆದರೂ ಕೂಡ ಡಿಕೆ ಶಿವಕುಮಾರ್ ಆ ಪಟ್ಟವನ್ನ ಅಲಂಕರಿಸಲು ಖುರ್ಚಿಯ ಪಕ್ಕದಲ್ಲಿಯೇ ನಿಂತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಗಾಗಿ ಬಿಟ್ಟು ಕೊಡಲು ಸಾಧ್ಯವಿದೆಯಾ ಎಂಬ ಅಭಿಪ್ರಾಯಗಳು ಸೋಷಿಯಲ್ ಮೀಡಿಯಾದಲ್ಲಿ ಎದ್ದಿವೆ.






