Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪಕ್ಷ ಬಿಜೆಪಿ, ಯಾರ ಮೈತ್ರಿಯೂ ಬೇಕಿಲ್ಲ : ಸಂಸದ ಶ್ರೀನಿವಾಸ್ ಪ್ರಸಾದ್..!

Facebook
Twitter
Telegram
WhatsApp

ಮೈಸೂರು: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಾಗಿದೆ ಎಂಬ ಮಾತುಗಳು ಅಲ್ಲಲ್ಲಿ ಕೇಳಿ ಬರ್ತಾ ಇದೆ. ಈ ಬಗ್ಗೆ ಮಾತನಾಡಿರು ಸಂಸದ ಶ್ರೀನಿವಾಸ್ ಪ್ರಸಾದ್ ಬಿಜೆಪಿಯಂತ ದೊಡ್ಡ ಪಕ್ಷಕ್ಕೆ ಯಾರ ಮೈತ್ರಿಯೂ ಅಗತ್ಯವಿಲ್ಲ ಎಂದಿದ್ದಾರೆ.

ಪರಿಷತ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ ಶ್ರೀನಿವಾಸ್ ಪ್ರಸಾದ್ ಸುದ್ದಿಗೋಷ್ಟಿ ನಡೆಸಿದ್ದು, ಮೈತ್ರಿ ಬಗ್ಗೆ ಗರಂ ಆಗಿದ್ದಾರೆ. ಬಿಜೆಪಿಗೆ ಯಾರ ಮೈತ್ರಿಯ ಅಗತ್ಯವೂ ಇಲ್ಲ. ಯಾರ ಜೊತೆಯೂ ಮೈತ್ರಿ ಮಾಡಿಕೊಳ್ಳಲ್ಲ ಎಂದಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಎಷ್ಟು ಸ್ಥಾನ ಗಳಿಸಿದೆ ಎಂಬುದನ್ನ ನಾವೂ ನೋಡಿದ್ದೇವೆ. ಹೆಚ್ಚು ಸ್ಥಾನದಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅಷ್ಟು ದೊಡ್ಡ ಪಕ್ಷಕ್ಕೆ ಯಾರ ಮೈತ್ರಿಯೂ ಅಗತ್ಯವಿಲ್ಲ ಎಂದಿದ್ದಾರೆ.

ಇದೆ ವೇಳೆ ಸಿದ್ದರಾಮಯ್ಯ ವಿಚಾರ ಮಾತನಾಡಿದ್ದು, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಿಟ್ಟು ಬದಾಮಿಗೆ ಹೋಗಿದ್ದು ಅವರ ಅಸಾಹಯಕತೆಯನ್ನ ತೋರಿಸುತ್ತದೆ. ಸೋತ ತಕ್ಷಣ ತಮ್ಮ ಕ್ಷೇತ್ರವನ್ನ ಬಿಟ್ಟುಕೊಡಬಾರದು. ಬಾದಾಮಿಯಲ್ಲಿ 35 ಸಾವಿರ ಮತಗಳಿಂದ ಸೋತಿದ್ದರು ಬುದ್ದಿ ಬಂದಿಲ್ಲ. ಸಿಎಂ ಆಗಿದ್ದವರು ನೀವೆ ಹೆದರಿಕೊಂಡು ಓಡಿದರೆ ಹೇಗೆ..? ವೀರಾವೇಷದ ಮಾತುಗಳನ್ನ ಆಡ್ತೀರಾ ಆದ್ರೆ ಹೆದರಿಕೊಂಡು ಬದಾಮಿಗೆ ಹೋಗ್ತೀರಾ ಎಂದು ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರ ಬಿಟ್ಟು ಬದಾಮಿಯಲ್ಲಿ ಸ್ಪರ್ಧಿಸಿದ್ದರ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!