Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಾಮಾಣಿಕತೆ ಹಾಗೂ ನಿಷ್ಠೆಗೆ ಲಂಬಾಣಿ ಸಮುದಾಯ ಹೆಸರುವಾಸಿ : ರಾಜಣ್ಣ

---Advertisement---

ಹಿರಿಯೂರು : ಪ್ರಾಮಾಣಿಕತೆ ಹಾಗೂ ನಿಷ್ಠೆಗೆ ಲಂಬಾಣಿ ಸಮುದಾಯವು ಹೆಸರುವಾಸಿಯಾಗಿದೆ. ಈ ಸಮುದಾಯ ಜಾನಪದ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕ ರಾಜಣ್ಣ ಅಭಿಪ್ರಾಯಪಟ್ಟರು.

ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ಲಂಬಾಣಿ ತಾಂಡಾ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ 286ನೇ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲಂಬಾಣಿ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯ ಮುನ್ನಡೆ ಸಾಧಿಸಿ ಅಭಿವೃದ್ಧಿ ಹೊಂದಬೇಕು ಎಂದರು.

12ನೇ ಶತಮಾನದ ಬಸವಣ್ಣನವರ ಕಾಯಕ ತತ್ವವನ್ನು ಸಂತ ಸೇವಾಲಾಲ್ ಅವರು ಪುನರುಚ್ಚರಿಸಿದ್ದಾರೆ. ಕಾಡಿನಲ್ಲಿ ಅಸಂಘಟಿತವಾಗಿ ವಾಸಿಸುತ್ತಿದ್ದ ಜನರಿಗೆ ನೆಲೆ ದೊರಕಿಸಿಕೊಡಲು ಹೋರಾಟ ಸಂಘಟಿಸಿದರು. ನಿಷ್ಠೆ ಭಕ್ತಿ ಹಾಗೂ ಶ್ರದ್ಧೆಯಿಂದ ಲಂಬಾಣಿ ಸಮಾಜವಲ್ಲದೇ ಇತರೆ ಸಮುದಾಯಗಳು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಂಜು ನಾಯ್ಕ್, ಷಣ್ಮುಖನಾಯ್ಕ್ , ಗುಂಡು ನಾಯ್ಕ್, ಗಿರೀಶ್ ನಾಯ್ಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...