Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

82ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಯಡಿಯೂರಪ್ಪ; ಹೇಗಿತ್ತು ಸೆಲೆಬ್ರೇಷನ್..?

---Advertisement---

ಬೆಂಗಳೂರು; ಬಿಜೆಪಿ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 82ನೇ ವರ್ಷದ ಹುಟ್ಟುಹಬ್ಬ. ಇಂದು ಅವರ ಕುಟುಂಬದವರೆಲ್ಲ ಸೇರಿ, ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಯಡಿಯೂರಪ್ಪ ನಿವಾಸ ದವಳಗಿರಿಗೆ ಇಂದು ಹೂಗಳಿಂದ ಅಲಂಕಾರಗೊಂಡಿದೆ. ಮನೆಯಲ್ಲಿ 82ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಮನೆಯಲ್ಲಿ ಯಡಿಯೂರಪ್ಪ ಅವರ ಮಕ್ಕಳು, ಸೊಸೆಯಂದಿರು, ಅಳಿಯಂದಿರೆಲ್ಲ ಬರ್ತ್ ಡೇ ಆಚರಿಸಿದ್ದು, ಬಳಿಕ ಮನೆ ದೇವರ ದರ್ಶನ ಪಡೆಯಲು ಹೋಗಿದ್ದಾರೆ.

ಮನೆ ದೇವರ ಜೊತೆಗೆ ಯಡಿಯೂರು ಶ್ರೀಸಿದ್ದಲಿಂಗೇಶ್ವರನಿಗೆ ಭೇಟಿ ನೀಡಿ, ವಿಶೇಷ ಪೂಜೆ ಮಾಡಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯವರೆಗೂ ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇರಲಿದ್ದು, ಬಳಿಕ ದೇವಸ್ಥಾನಗಳಿಗೆ ತೆರಳಲಿದ್ದಾರೆ. ಈ ಸಮಯದಲ್ಲಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಶುಭಾಶಯಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಅವರ ಕಾರ್ಯಕರ್ತರು, ಅಭಿಮಾನಿಗಳೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ಹಲವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ.

ಬಿಜೆಪಿ ಸಂಸದ ಬಿವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಕುಟುಂಬ ಸಮೇತ ಡಾಲರ್ಸ್ ಕಾಲೋನಿ ಮನೆಗೆ ಬಂದಿದ್ದು, ವಿಶೇಷವಾಗಿ ಶುಭಾಶಯ ಕೋರಿದ್ದಾರೆ. ಇನ್ನು ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭ ಕೋರುವ ಬ್ಯಾನರ್, ಫ್ಲೆಕ್ಸ್​ಗಳ ಅಳವಡಿಕೆ ಜೋರಾಗಿದೆ. ಇನ್ನು ಪಕ್ಷದ ಮುಖಂಡರು, ಆಪ್ತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿವಾಸಕ್ಕೆ ಆಗಮಿಸಿ ಶುಭಶಯಗಳನ್ನು ತಿಳಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಈಗ 82 ವರ್ಷ ವಯಸ್ಸು. ಇನ್ನಷ್ಟು ಆರೋಗ್ಯ, ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment