ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 25 : ಹಂಪಿ, ಕಿತ್ತೂರು ಉತ್ಸವದಂತೆ ಪ್ರತಿ ವರ್ಷವೂ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಚಿತ್ರದುರ್ಗ ನಾಯಕ ಸಮಾಜದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಮಾರ್ಚ್ ಅಥವಾ ಏಪ್ರಿಲ್ನಲ್ಲಿ ದುರ್ಗೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಬೇಕೆಂಬುದು ದುರ್ಗದ ಜನರ ಒತ್ತಾಸೆಯಾಗಿರುವುದರಿಂದ ಈ ಬಾರಿಯ ರಾಜ್ಯ ಬಜೆಟ್ ಮಂಡನೆಯಲ್ಲಿ ಸೇರಿಸುವಂತೆ ನಾಯಕ ಸಮಾಜದವರು ಸಚಿವರನ್ನು ಒತ್ತಾಯಿಸಿದರು.
ತ.ರಾ.ಸು.ರಂಗಮಂದಿರದಲ್ಲಿ ನಡೆದ ಸಂವಿಧಾನ ರಕ್ಷಾ ಅಭಿಯಾನ ಉದ್ಗಾಟನೆಗಾಗಿ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೊಳಿರವರಿಗೆ ಮನವಿ ಸಲ್ಲಿಸಿ ಐತಿಹಾಸಿಕ ಚಿತ್ರದುರ್ಗ ಕೋಟೆಯನ್ನು ರಾಜವೀರ ಮದಕರಿನಾಯಕ ಆಳಿರುವುದರಿಂದ ಚಿತ್ರದುರ್ಗಕ್ಕೆ ತನ್ನದೆ ಆದ ಗತ ವೈಭವವಿದೆ. ಹಾಗಾಗಿ ಪ್ರತಿ ವರ್ಷವೂ ದುರ್ಗೋತ್ಸವ ಆಚರಿಸಿದರೆ ಚಿತ್ರದುರ್ಗದ ಇತಿಹಾಸ ಸಂಸ್ಕøತಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ವಿನಂತಿಸಿದರು.
ನಾಯಕ ಸಮಾಜದ ಮುಖಂಡರುಗಳಾದ ಎ.ತಿಪ್ಪೇಸ್ವಾಮಿ, ಎಸ್.ಮಂಜುನಾಥ, ವೆಂಕಟೇಶ್, ಅಶೋಕ್ಬೆಳಗಟ್ಟ, ರವಿ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















