Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ: ಕೆ.ವಿ.ಪ್ರಭಾಕರ್

---Advertisement---

ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.

ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment