Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್‌ನಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಕ್ಕೆ ಹಣ ಮೀಸಲಿಡಿ : ನರೇನಹಳ್ಳಿ ಅರುಣ್‍ಕುಮಾರ್ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 05 : ರಾಜ್ಯ ಸರ್ಕಾರ ಈ ಬಾರಿ ಮಂಡಿಸಲಿರುವ ಬಜೆಟ್‍ನಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಹಣ ಮೀಸಲಿಡುವಂತೆ ಅಲೆಮಾರಿ, ಅರೆಅಲೆಮಾರಿ ಎಸ್ಸಿ, ಎಸ್ಟಿ, ಬುಡಕಟ್ಟು ಮಹಾಸಭಾ ಅಧ್ಯಕ್ಷ ಕೆ.ಎಂ.ನಾಗರಾಜ್ ಒತ್ತಾಯಿಸಿದರು.

ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅಲೆಮಾರಿ, ಅರೆಅಲೆಮಾರಿಗಳು ಇಂದಿಗೂ ಚಿಂದಿ ಆಯುವ ಕೆಲಸ ಮಾಡಿಕೊಂಡು ಬದುಕುತ್ತಿದ್ದಾರೆ. ವಾಸಿಸಲು ಮನೆಯಿಲ್ಲ. ಟೆಂಟ್‍ಗಳನ್ನು ಹಾಕಿಕೊಂಡು ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನಿಕೃಷ್ಠವಾಗಿ ಬದುಕುತ್ತಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸುವ ಬಜೆಟ್‍ನಲ್ಲಿ ನಾಲ್ಕು ನೂರು ಕೋಟಿ ರೂ.ಗಳನ್ನು ಮೀಸಲಿಡುವಂತೆ ಮನವಿ ಮಾಡಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡಿ 2016-17 ರಲ್ಲಿ ರಾಜ್ಯ ಸರ್ಕಾರ ಬಜೆಟ್‍ನಲ್ಲಿ 130 ಕೋಟಿ ರೂ.ಗಳನ್ನು ಘೋಷಿಸಿದ್ದನ್ನು ಬಿಟ್ಟರೆ ಇಲ್ಲಿಯವರೆಗೂ ಅಲೆಮಾರಿ, ಅರೆಅಲೆಮಾರಿಗಳಿಗೆ ಹಣ ಮೀಸಲಿಟ್ಟಿಲ್ಲ. ರಾಜ್ಯದಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಹಾಗಾಗಿ ಅಲೆಮಾರಿ, ಅರೆಅಲೆಮಾರಿಗಳ ಪುನಶ್ಚೇತನಕ್ಕಾಗಿ ಬಜೆಟ್‍ನಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿದರು.

ಬುಡ್ಗ ಜಂಗಮ ಜನಾಂಗದ ಅಧ್ಯಕ್ಷ ವಸಂತಕುಮಾರ್, ಚನ್ನದಾಸ ಜನಾಂಗದ ನಾಗರಾಜ್, ಸುಡುಗಾಡು ಸಿದ್ದ ಸಮುದಾಯದ ಬಾಬು ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment