Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾ.6 ಮತ್ತು 7 ರಂದು ಸ್ಥಾನಿಕ ಸಂಸ್ಥಾನಗಳು ಕುರಿತು ವಿಚಾರ ಸಂಕಿರಣ : ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 05 : ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಚಿತ್ರದುರ್ಗ ಇಲ್ಲಿ ಮಾ.6 ಮತ್ತು 7 ರಂದು ಜಿಲ್ಲೆಯ ಸ್ಥಾನಿಕ ಸಂಸ್ಥಾನಗಳು ಕುರಿತು ಎರಡು ದಿನಗಳ ವಿಚಾರ ಸಂಕಿರಣ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲರಾದ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 6 ರಂದು ಬೆಳಿಗ್ಗೆ 10-30 ಕ್ಕೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ವಿಚಾರ ಸಂಕಿರಣ ಉದ್ಗಾಟಿಸಲಿದ್ದಾರೆ. ಹೈದರಾಲಿ ಚಿತ್ರದುರ್ಗದ ಕೋಟೆ ಮೇಲೆ ದಂಡೆತ್ತಿ ಬಂದ ಇತಿಹಾಸವಿದೆ. ಚಿತ್ರದುರ್ಗಕ್ಕೆ ಪಾಳೆಯಗಾರರ ಕೊಡುಗೆ ಏನು ಎನ್ನುವ ವಿಚಾರ ಕುರಿತು ವಿಚಾರ ಸಂಕಿರಣದಲ್ಲಿ ಬೆಳಕು ಚೆಲ್ಲಲಾಗುವುದೆಂದರು.

ಡಾ.ಬಿ.ಸುರೇಶ ಮಾತನಾಡಿ ಪಾಳೆಯಗಾರರು ಆಳಿದ ಚಿತ್ರದುರ್ಗ ಜಿಲ್ಲೆಯಲ್ಲಿ ದೇವಾಲಯ, ಶಾಸನಗಳು ಇವೆ. ಜಿಲ್ಲೆಯ ಸಾಂಸ್ಕøತಿಕ ಮತ್ತು ಐತಿಹಾಸಿಕ ವಿಚಾರಗಳ
ಮೇಲೆ ಬೆಳಕು ಚೆಲ್ಲುವುದು ವಿಚಾರ ಸಂಕಿರಣದ ಉದ್ದೇಶ ಎಂದು ಹೇಳಿದರು.

ಐ.ಕ್ಯೂ.ಎ.ಸಿ. ಸಂಚಾಲಕಿ ತಾರಿಣಿ ಶುಭದಾಯಿನಿ ಮಾತನಾಡುತ್ತ ಪಾಳೆಯಗಾರರು ಆಳಿದ ಚಿತ್ರದುರ್ಗಕ್ಕೆ ತನ್ನದೆ ಆತ ಗತ ವೈಭವವಿದೆ. ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಲು ಸಾರ್ವಜನಿಕರಿಗೂ ಮುಕ್ತ ಅವಕಾಶ ಕೊಟ್ಟಿದ್ದೇವೆಂದರು.

ಸ್ನಾತಕೋತ್ತರ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಆರ್.ಶಿವಪ್ಪ ಮಾತನಾಡಿ ನೆರೆಯ ಆಂಧ್ರ, ತಮಿಳುನಾಡಿನಿಂದಲೂ ವಿಚಾರ ಸಂಕಿರಣಕ್ಕೆ ಆಗಮಿಸುವರು. ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿಚಾರ ಸಂಕಿರಣದಲ್ಲಿ ಚಿತ್ರದುರ್ಗದ ಇತಿಹಾಸ ಕುರಿತು ಮಾತನಾಡುವರು. ಮುನ್ನೂರರಿಂದ ಐದುನೂರು ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಆರ್.ಗಂಗಾಧರ, ಶಿವಪ್ರಸಾದ್, ಶ್ರೀನಿವಾಸ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment