ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 06 : ಹಾಡುಹಗಲಲ್ಲೇ
ಸ್ಕೂಟಿಯಲ್ಲಿದ್ದ ಹಣ ದೋಚಿ ಕಳ್ಳತನ ಮಾಡಿರುವ ಘಟನೆ ನಗರದ ಬೆಂಗಳೂರು ರಸ್ತೆಯ ಮಾರುತಿ ಸ್ಟೋರ್ ಬಳಿ ನಡೆದಿದೆ.
ನರಹರಿ ನಗರದ ರವಿಕುಮಾರ್ ಕರ್ನಾಟಕ ಬ್ಯಾಂಕ್ ನಲ್ಲಿ 1.40 ಲಕ್ಷ ರೂ ಡ್ರಾ ಮಾಡಿಕೊಂಡು ಬೆಂಗಳೂರು ರಸ್ತೆಯ ಮಾರುತಿ ಸ್ಟೋರ್ ಕಿರಾಣಿ ಅಂಗಡಿ ಬಳಿ ಸ್ಕೂಟಿ ನಿಲ್ಲಿಸಿ ಒಳಗೆ ಹೋದಾಗ ಹೊಂಚು ಹಾಕಿ ಕಾಯುತ್ತಿದ್ದ ಮೂವರು ಖದೀಮರು ಈ ಕೃತ್ಯ ಮಾಡಿದ್ದಾರೆ. ಅವರಲ್ಲಿ ಓರ್ವ ಸ್ಕೂಟಿ ಕಾಣದಂತೆ ಅಂಗಡಿ ಮುಂದೆ ಅಡ್ಡವಾಗಿ ನಿಂತರೆ ಉಳಿದ ಇಬ್ಬರು ಸ್ಕೂಟಿಯಲ್ಲಿದ್ದ 1.40 ಲಕ್ಷ ಹಣವನ್ನು ಕದ್ದು ಮೂವರು ಪರಾರಿಯಾಗಿದ್ದಾರೆ.
ಸ್ಕೂಟಿ ಮಾಲಿಕ ರವಿಕುಮಾರ್ ಬಂದು ನೋಡಿದಾಗ ಹಣ ಕಳಾವಾಗಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಅಂಗಡಿಯಲ್ಲಿ ಸಿ.ಸಿ.ಕ್ಯಾಮರ ಪರಿಶೀಲನೆ ಮಾಡಿದಾಗ ಮೂವರು ಸೇರಿ ಕಳವು ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ತಕ್ಷಣ ಪೋಲಿಸ್ ಠಾಣೆಗೆ ದೂರು ನೀಡಿದ್ದು ಸಿ.ಸಿ.ಕ್ಯಾಮರದಲ್ಲಿನ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್