Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಹಾಡುಹಗಲೇ ಸ್ಕೂಟಿಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣದೋಚಿದ ಕಳ್ಳರು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 06 : ಹಾಡುಹಗಲಲ್ಲೇ
ಸ್ಕೂಟಿಯಲ್ಲಿದ್ದ ಹಣ ದೋಚಿ ಕಳ್ಳತನ ಮಾಡಿರುವ ಘಟನೆ ನಗರದ ಬೆಂಗಳೂರು ರಸ್ತೆಯ ಮಾರುತಿ ಸ್ಟೋರ್ ಬಳಿ ನಡೆದಿದೆ.

ನರಹರಿ ನಗರದ ರವಿಕುಮಾರ್ ಕರ್ನಾಟಕ ಬ್ಯಾಂಕ್ ನಲ್ಲಿ‌ 1.40 ಲಕ್ಷ ರೂ ಡ್ರಾ ಮಾಡಿಕೊಂಡು ಬೆಂಗಳೂರು ರಸ್ತೆಯ ಮಾರುತಿ ಸ್ಟೋರ್ ಕಿರಾಣಿ ಅಂಗಡಿ ಬಳಿ ಸ್ಕೂಟಿ ನಿಲ್ಲಿಸಿ ಒಳಗೆ ಹೋದಾಗ ಹೊಂಚು ಹಾಕಿ ಕಾಯುತ್ತಿದ್ದ ಮೂವರು ಖದೀಮರು ಈ ಕೃತ್ಯ ಮಾಡಿದ್ದಾರೆ. ಅವರಲ್ಲಿ ಓರ್ವ ಸ್ಕೂಟಿ ಕಾಣದಂತೆ ಅಂಗಡಿ ಮುಂದೆ ಅಡ್ಡವಾಗಿ ನಿಂತರೆ ಉಳಿದ ಇಬ್ಬರು ಸ್ಕೂಟಿಯಲ್ಲಿದ್ದ 1.40 ಲಕ್ಷ ಹಣವನ್ನು ಕದ್ದು ಮೂವರು ಪರಾರಿಯಾಗಿದ್ದಾರೆ.

ಸ್ಕೂಟಿ ಮಾಲಿಕ ರವಿಕುಮಾರ್ ಬಂದು ನೋಡಿದಾಗ ಹಣ ಕಳಾವಾಗಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಅಂಗಡಿಯಲ್ಲಿ ಸಿ.ಸಿ.ಕ್ಯಾ‌ಮರ ಪರಿಶೀಲನೆ ಮಾಡಿದಾಗ ಮೂವರು ಸೇರಿ ಕಳವು ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ತಕ್ಷಣ ಪೋಲಿಸ್ ಠಾಣೆಗೆ ದೂರು ನೀಡಿದ್ದು ಸಿ.ಸಿ.ಕ್ಯಾಮರದಲ್ಲಿನ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment