ಬಜೆಟ್ ನಲ್ಲಿ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

suddionenews
1 Min Read

ಬೆಂಗಳೂರು; 2025-26ನೇ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿ ಮತ್ತು‌ ತೋಟಗಾರಿಕೆ ಇಲಾಖೆಗೆ 7 ಸಾವುರದ 145 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರಿಗೆ ರೈತ ಸಮೃದ್ಧಿ ಯೋಜನೆ, ಕೃಷಿ ಯಾಂತ್ರೀಕರಣ ಯೋಜನೆಯಡಿ 50 ಸಾವಿರ ರೈತರಿಗೆ 428 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಕೃಷಿ ಭಾಗ್ಯ 3 ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡ ನಿರ್ಮಾಣ ಮಾಡಲಾಗುತ್ತಿದ್ದು, ಈ ವರ್ಷ 12 ಸಾವಿರ ಕೃಷಿ ಹೊಂಡಗಳನ್ನ ನಿರ್ಮಿಸುವ ಗುರಿ ಹೊಂದಲಾಗಿದೆ.

ಇನ್ನು ತೊಗರಿಬೇಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ ಮಾಡುವುದು. ತೊಗರಿಯನ್ನ ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸಲು ಕ್ರಮ. ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸುವ ಉದ್ದೇಶ ಹೊಂದಲಾಗಿದೆ. ರೈತರ ಆದಾಯ ಹಾಗೂ ಪೌಷ್ಟಿಕ ಭದ್ರತೆಯನ್ನ ಸುಧಾರಿಸಲು 88 ಕೋಟಿ ರೂಪಾಯಿ ನೀಡಲಾಗಿದೆ.

ರಾಜ್ಯದಲ್ಲಿ 6 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಒತ್ತು ನೀಡಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ 3 ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡ ನಿರ್ಮಾಣ, ರಸಗೊಬ್ಬರ, ಬಿತ್ತನೆ ಬೀಜ, ಜೈವಿಕ ಗೊಬ್ಬರ ಗುಣಮಟ್ಟದ ಪರೀಕ್ಷೆಗೆ 58 ಪ್ರಯೋಗಾಲಯ. ವಿಜಯಪುರ ಮುದ್ದೆಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ. ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ, ಮಂಡ್ಯ ಕೃಷಿ ವಿವಿ ಸ್ಥಾಪನೆಗೆ 25 ಕೋಟಿ ರೂಪಾಯಿ ನೀಡಿಕೆ. 11 ಲಕ್ಷ ಹೆಕ್ಟೇರ್​ ಪ್ರದೇಶದಲ್ಲಿ ಭೂಸಂಪನ್ಮೂಲ ಪೂರ್ಣಕ್ಕೆ ಕ್ರಮ, ಜೈವಿಕ ಕೃಷಿ ಪರಿಕರ ಸ್ಟಾರ್ಟ್​​ಅಪ್​ಗಳ ಮೂಲಕ ಮಾರಾಟಕ್ಕೆ ಉತ್ತೇಜನ

Share This Article
Leave a Comment

Leave a Reply

Your email address will not be published. Required fields are marked *