Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಾವಣಗೆರೆಯಲ್ಲಿ ಕ್ವಿಂಟಾಲ್ ಅಡಿಕೆಯ ಬೆಲೆ ಇಂದು ಎಷ್ಟಿದೆ..?

---Advertisement---

 

ದಾವಣಗೆರೆ; ಅಡಿಕೆ ಬೆಲೆ ಕೂಡ ಒಂದೊಮದು ಮಾರುಕಟ್ಟೆಯಲ್ಲಿ ಒಂದೊಂದು ರೀತಿ ಇರಲಿದೆ. ದಾವಣಗೆರೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತವನ್ನ ಪ್ರಮುಖ ಬೆಳೆಯಾಗಿ ಬೆಳೆಯುತ್ತಾರೆ. ಆದರೆ ಅಡಿಕೆ ಬೆಳೆಗಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ. ಹೀಗಾಗಿ ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಎಷ್ಟಕ್ಕೆ ಹೋಯ್ತು ಎಂಬ ಕುತೂಹಲ ಇದ್ದೆ ಇರುತ್ತದೆ. ಆ ಮಾಹಿತಿ ಇಲ್ಲಿದೆ ನೋಡಿ.

ಕ್ವಿಂಟಾಲ್ ಅಡಿಕೆಯ ಗರಿಷ್ಠ ದರ 52,279 ರೂಪಾಯಿ ಇದೆ. ಕಳೆದ ದಿನದ ಮಾರುಕಟ್ಟೆಯ ದರಕ್ಕೆ ಹೋಲಿಕೆ ಮಾಡಿದರೆ ಸುಮಾರು 179 ರೂಪಾಯಿ ಏರಿಕೆಯಾಗಿದೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದೆ. ಬೇಸಿಗೆ ಆಗಿರೋ ಕಾರಣ ಬಿಸಿಲು ಜಾಸ್ತಿ, ಈ ಬಿರು ಬೇಸಿಗೆಯಲ್ಲಿ ಅಡಿಕೆ ಗಿಡಗಳನ್ನ ಕಾಪಾಡಿಕೊಳ್ಳುವುದೇ ರೈತನಿಗೆ ಒಂದು ದೊಡ್ಡ ಟಾಸ್ಕ್ ಆಗಿದೆ. ಹೀಗಾಗಿ ಅಡಿಕೆ ಬೆಲೆ ಜಾಸ್ತಿಯಾಗಿರೋದಕ್ಕೆ ರೈತನ ಮೊಗದಲ್ಲಿ ಕೊಂಚ ನೆಮ್ಮದಿಯ ನಗು ಕಾಣಿಸುತ್ತಿದೆ.

ಚನ್ನಗಿರಿ ಅಡಿಕೆ ಧಾರಣೆ ಗರಿಷ್ಠ 52,279 ರೂಪಾಯಿ ಆಗಿದೆ. ಹಾಗೇ ಕನಿಷ್ಠ 43,000 ರೂಪಾಯಿ ಇತ್ತು. ಬೆಟ್ಟೆ ಅಡಿಕೆ ಗರಿಷ್ಠ 24,786 ರೂಪಾಯಿ ಇದೆ. ಗರಿಷ್ಠ ದರ 17,659 ರೂಪಾಯಿ ಇತ್ತು. ಇನ್ನು ಜನವರಿಯಲ್ಲಿ 52 ಸಾವಿರದ ಒಳಗಿದ್ದ ಅಡಿಕೆ, ಫೆಬ್ರವರಿಯಲ್ಲಿ 53 ಸಾವಿರದ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿಯೇ ಅಡಿಕೆ ಬೆಳೆಗಾರರಿಗೆ ಕೊಂಚ ಸಮಾಧಾನವಾಗುವಂತ ದರ ಕಂಡು ಬಂದಿದೆ. ಅಡಿಕೆ ದರ ಹೀಗೆ ಏರಿಕೆಯಾದರೆ ರೈತರಿಗೂ ಒಂದು ನೆಮ್ಮದಿ. ಯಾಕಂದ್ರೆ ಅಡಿಕೆ ಬೆಳೆಗೆ ನೀರನ್ನ ಒದಗಿಸೋದು ಒಂದೇ ಸವಾಲಿನ ಕೆಲಸವಲ್ಲ, ಜೊತೆಗೆ ರೋಗಗಳಿಂದಾನು ಅಡಿಕೆ ಬೆಳೆಯನ್ನ ಕಾಪಾಡಿಕೊಳ್ಳಬೇಕಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...