Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಳೆಯರು ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಕೌಶಲ್ಯಾಭಿವೃದ್ಧಿಗೆ ಯತ್ನಿಸಿ : ಶ್ರೀಮತಿ ಪ್ರೇಮಾವತಿ ಮನಗೊಳಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಡಿ.08) : ಮಹಿಳೆಯರು ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಕೌಶಲ್ಯಾಭಿವೃದ್ಧಿಗೊಳಿಸಿಕೊಳ್ಳಲು ಯತ್ನಿಸಬೇಕು.  ತಮ್ಮ ಕೌಶಲ್ಯಗಳನ್ನು ಉಪಯೋಗಿಸಿ, ಸ್ವಉದ್ಯೋಗವನ್ನು ಮಾಡಿ ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಲು ಗಮನ ಹರಿಸಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಪ್ರೇಮಾವತಿ ಮನಗೊಳಿ ಹೇಳಿದರು.

ನಗರದ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ನಿರುದ್ಯೋಗಿ ಯುವತಿಯರಿಗಾಗಿ ಉದ್ಯಮಶೀಲತಾಭಿವೃದ್ಧಿಯಲ್ಲಿ ಮಹಿಳೆಯರ ಟೈಲರಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಮಹಿಳೆಯರು ಯಾರೊಬ್ಬರ ಮೇಲೂ ಅವಲಂಬಿಗಳಾಗದೆ, ಮಹಿಳೆಯರು ಸ್ವಾವಲಂಬಿಗಳಾಗಬೇಕು. ಈ ಟೈಲರಿಂಗ್ ಉದ್ಯೋಗ ಒಂದು ಸಾರ್ವತ್ರಿಕ ಉದ್ಯಮ, ಮನೆಯಲ್ಲಿ ಒಂದು ಚಿಕ್ಕದಾಗಿ ಉದ್ಯಮವನ್ನು ಆರಂಭ ಮಾಡಿದರೂ ಮನೆಯನ್ನು ನಡೆಸುವಷ್ಟು ಆದಾಯ ಗಳಿಸಬಹುದು.

ಈ ಉದ್ಯಮದಲ್ಲಿ ಸಮಯಪಾಲನೆ ಮತ್ತು ಬದ್ಧತೆಯೊಂದಿಗೆ ಆಧುನಿಕ ಜೀವನ ಶೈಲಿಗನುಗುಣವಾಗಿ ನಿಮ್ಮ ಉದ್ಯಮದಲ್ಲಿ ನೂತನ ವಿನ್ಯಾಸಗಳನ್ನು ಅಳವಡಿಸಿಕೊಂಡಾಗ ತಾಂತ್ರಿಕವಾಗಿ ಬದಲಾಗುತ್ತಿರುವ ಉದ್ಯಮದಲ್ಲಿ ಮುಂದುವರಿಯಲು ಸಾದ್ಯವಾಗುತ್ತದೆ.

ಸಕಾರಾತ್ಮಕ ಮನೋಭಾವದೊಂದಿಗಿನ ಕೆಲಸ ಮತ್ತು ನಗು ಮುಖದ ಸೇವೆ ಇವು ಯಶಸ್ವಿ ಉದ್ಯೋಗಿಗಳ ಗುಟ್ಟು ಎಂದು ತಿಳಿಸುತ್ತಾ ಮಾಡುವ ವೃತ್ತಿಯನ್ನು ಪ್ರೀತಿಯಿಂದ ಹಾಗೂ ಶ್ರದ್ಧೆಯಿಂದ ಮಾಡಿ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಮಂಜುಳಾ.ಜಿ. ರವರು ಮಾತನಾಡಿ, ತರಬೇತಿ ಅವಧಿಯಲ್ಲಿ ಕಲಿತ ಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಂಡು ಯಶಸ್ವಿ ಜೀವನಕ್ಕೆ ಅಡಿಪಾಯ ಹಾಕಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಶ್ರೀಮತಿ ಶೋಭಾ.ಎಸ್. ಮತ್ತು  ಯೋಗಿಶ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕರಾದ ತೋಟಪ್ಪ ಎಸ್. ಗಾಣಿಗೇರ, ಕಾರ್ಯಕ್ರಮ ನಿರೂಪಿಸಿದರು.  ಶ್ರೀಮತಿ ಲತಾಮಣಿ ವಂದನಾರ್ಪಣೆ ಮಾಡಿದರು. ಒಟ್ಟು ಕಾರ್ಯಕ್ರಮದಲ್ಲಿ 60 ಜನ ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!