Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲೆಯ ನೀರಿನ ಟ್ಯಾಂಕ್ ಗೆ ವಿಷ : ಅದೃಷ್ಟವಶಾತ್ ಅನಾಹುತದಿಂದ ಪಾರಾದ ಮಕ್ಕಳು..!

Facebook
Twitter
Telegram
WhatsApp

ಮಡಿಕೇರಿ: ಕೊಡಗು ಜಿಲ್ಲೆಯ ಸೋಮಾವಾರ ಪೇಟೆಯ ಸುಂಟಿಕೊಪ್ಪ ಶಾಲೆಯಲ್ಲಿ ಭಾರಿ ಅನಾಹುತವಾಗುತ್ತಿತ್ತು. ಶಾಲಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಆ ಅನಾಹುತ ಕೈ ತಪ್ಪಿದೆ. ಮಕ್ಕಳ ಜೀವ ಉಳಿದಿದೆ.

ಸುಂಟಿಕೊಪ್ಪದಲ್ಲಿರುವ ಶಾಲೆಯ ಟ್ಯಾಂಕರ್ ಒಳಗೆ ಕಿಡಿಗೇಡಿಗಳು ವಿಷ ಬೆರೆಸಿದ್ದಾರೆ. ಇದನ್ನ ನೋಡದೆ ನೀರು ಕುಡಿದಿದ್ದರೆ ಮಕ್ಕಳು, ಶಿಕ್ಷಕರು, ಸಿಬ್ಬಂದಿಯ ಗತಿ ಏನಾಗ್ತಾ ಇತ್ತು. ಆದ್ರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಸರ್ಕಾರಿ ಶಾಲೆಯ ನೀರಿನ ಟ್ಯಾಂಕರ್ ಗೆ ವಿಷ ಬೆರೆಸಲಾಗಿತ್ತು. ಬೆಳಗ್ಗೆ ಶೌಚಾಲಯ ಶುಚಿಗೊಳಿಸಲು ಸಿಬ್ಬಂದಿ ಲತಾ ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ. ಲತಾ ತಕ್ಷಣ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಆ ನೀರನ್ನ ಯಾರು ಉಪಯೋಗಿಸದಂತೆ ಮಕ್ಕಳಿಗೂ ಸೂಚನೆ ನೀಡಲಾಗಿದೆ. ನಂತರ ಸುಂಡಿಕೊಪ್ಪ ಪೊಲೀಸ್ ಠಾಣೆಗೆ ಶಾಲಾ ಆಡಳಿತ ಮಂಡಳಿ ದೂರು ನೀಡಿದೆ.

ಈ ಮುಂಚೆಯೂ ಶಾಲಾ ಆವರಣದಲ್ಲಿ ಪುಂಡರ ಹಾವಳಿ ಜಾಸ್ತಿಯಾಗಿದೆ ಎಂದು ದೂರು ನೀಡಲಾಗಿತ್ತು. ಆದ್ರೂ ಏನು ಪ್ರಯೋಜನವಾಗಿಲ್ಲ. ಪುಂಡರು ಮದ್ಯ ಕುಡಿದು ಬಾಟೆಲ್ ಗಳನ್ನ ಬಿಸಾಕುವುದು, ಸಿಗರೇಟ್ ಸೇದಿ ಬಿಸಾಡುವುದು ಹೀಗೆ ಸಾಕಷ್ಟು ಅಸಹ್ಯ ಮಾಡಿ ಬಿಸಾಕುತ್ತಿದ್ದರು. ಈಗ ಮತ್ತೆ ಈ ಘಟನೆ ಸಂಬಂಧ ಮತ್ತೆ ದೂರು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!