Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೇನಾ ಹೆಲಿಕಾಪ್ಟರ್ ಪತನ : ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇನ್ನಿಲ್ಲ

Facebook
Twitter
Telegram
WhatsApp

ಚೆನ್ನೈ:  ತಮಿಳುನಾಡಿನ ಕೂನೂರು ನೀಲಗಿರಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು, ಅಪಘಾತದಲ್ಲಿ ಈಗಾಗಲೇ 12 ಮಂದಿ ಸಾವನ್ನಪ್ಪಿದ್ದಾರೆ.ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಕೂಡ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾವತ್ ಸಾವು ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದ್ದಾರೆ. ರಾವತ್ ಜೊತೆಗೆ ಅವರ ಪತ್ನಿ ಮಧುಲಿಕಾ ಕೂಡ ಸಾವನ್ನಪ್ಪಿದ್ದರು.

ಭಾರತೀಯ ವಾಯುಪಡೆಯು ಬಿಪಿನ್ ರಾವತ್ ಸಾವನ್ನು ದೃಢಪಡಿಸಿದೆ. ಅಪಘಾತದ ವೇಳೆ ಹೆಲಿಕಾಪ್ಟರ್ ನಲ್ಲಿ ಒಟ್ಟು 14 ಮಂದಿ ಇದ್ದರು.13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾವತ್ ಅವರು ತಮ್ಮ ಪತ್ನಿ ಮತ್ತು ಇತರ 12 ಮಂದಿಯೊಂದಿಗೆ ಸೇನೆಯ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 11.40 ಗಂಟೆಗೆ ವೆಲ್ಲಿಂಗ್ಟನ್‌ಗೆ ತೆರಳಿದರು. ವೆಲ್ಲಿಂಗ್ಟನ್ ಆರ್ಮಿ ಸೆಂಟರ್ ನಿಂದ ಹೊರಟ ಎಂಐ ಸಿರೀಸ್ ಹೆಲಿಕಾಪ್ಟರ್ ಸ್ವಲ್ಪ ಹೊತ್ತಿನಲ್ಲೇ ಕೂನೂರು ಬಳಿ ಪತನಗೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!