Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಸಚಿವ ಕುಮಾರಸ್ವಾಮಿಗೆ ಮತ್ತೆ ಅನಾರೋಗ್ಯ ; ದೆಹಲಿ ಪ್ರವಾಸ ರದ್ದು

---Advertisement---

ಬೆಂಗಳೂರು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೆ ಅನಾರೋಗ್ಯ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಪ್ರಯಾಣದ ಪ್ಲ್ಯಾನ್ ಗಳನ್ನು ರದ್ದು ಮಾಡಿದ್ದಾರೆ. ಇಂದಿನ ಸಂಸತ್ ಅಧಿವೇಶನದಲ್ಲೂ ಭಾಗಿಯಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಕಫ ಹಾಗೀ ಕೆಮ್ಮು ಹೆಚ್ಚಾಗಿದೆ. ಹೀಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.

ಕಳೆದ ಮೂರ್ನಾಲ್ಕು ದಿನದಿಂದ ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಸದ್ಯ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದೇ ಹೇಳಲಾಗುತ್ತಿದೆ. ಕಫ, ಕೆಮ್ಮು ವಿಚಾರಕ್ಕೆ ಕುಮಾರಸ್ವಾಮಿ ಅವರು ಚೆನ್ನೈಗೆ ತೆರಳಿ ಚಿಕಿತ್ಸೆಯನ್ನ ಪಡೆದುಕೊಂಡಿದ್ದರು. ಆದರೆ ಅಲ್ಲಿ ಅಷ್ಟಾಗಿ ಆರೋಗ್ಯ ಸುಧಾರಣೆಯಾಗಿಲ್ಲ. ಜೊತೆಗೆ ಕಫ, ಕೆಮ್ಮು ಕೂಡ ಕಡಿಮೆಯಾಗಿಲ್ಲ. ಹೀಗಾಗಿ ಜಿಂದಾಲ್ ನ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಹಿಳಾ ದಿನಾಚರಣೆಯ ಕಾರ್ಯಕ್ರಮಕ್ಕೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದರು. ಹಾಗೇ ಇಂದು ದೆಹಲಿಗೆ ಪ್ರಯಾಣ ಬೆಳೆಸುವುದಕ್ಕೆ ಕಾರ್ಯಕ್ರಮ ಸಿದ್ಧವಾಗಿತ್ತು. ಆದರೆ ಪ್ರಯಾಣವನ್ನು ರದ್ದು ಮಾಡಿಕೊಂಡಿದ್ದರು. ಈಗ ಕೊಂಚ ಆರೋಗ್ಯದಲ್ಲಿ ಸುಧಾರಣೆ ಕಂಡಿರೊ ಕಾರಣ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಇನ್ನು ಕೇಂದ್ರ ಸಚುವರಾದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಕ್ಕಾಪಟ್ಟೆ ಓಡಾಟ ನಡೆಸಿದ್ದರು. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರತ್ಯೇಕ ಭೇಟಿ ನೀಡಿ ಜನರ ಸಮಸ್ಯೆಗಳ ಬಗ್ಗೆ ಕೇಳುತ್ತಿದ್ದರು. ವಿಶ್ರಾಂತಿಯೇ ಪಡೆಯದೆ ಓಡಾಡುತ್ತಿದ್ದದ್ದು ಅವರ ಅನಾರೋಗ್ಯಕ್ಕೆ ಕಾರಣವಾಗಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment